ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm