ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm