ಬ್ರೇಕಿಂಗ್ ನ್ಯೂಸ್
11-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ಸಚಿವ ಸಂಪುಟ ಪುನರ್ ರಚನೆಗೆ ಒಲವು ತೋರಿದ್ದ ದೆಹಲಿ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಮನವೊಲಿಸಿದ್ದು, ಸಂಪುಟ ಸರ್ಜರಿಯನ್ನು ವರ್ಷಾಂತ್ಯದ ವರೆಗೂ ಮುಂದಕ್ಕೆ ಹಾಕಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಿದ್ದಾರೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಕೇಂದ್ರ ನಾಯಕರನ್ನು ಒಪ್ಪಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸು ಕುಸಿದಿದ್ದು, ಇದರ ನಡುವೆ ಸಚಿವರ ಬದಲಾವಣೆ ದೋಷವನ್ನು ಒಪ್ಪಿಕೊಂಡಿದ್ದೇವೆಂಬ ಸಂದೇಶ ರವಾನಿಸುತ್ತದೆ. ಹೀಗಾಗಿ, ಸದ್ಯಕ್ಕೆ ಯಾವುದೇ ಬದಲಾವಣೆ ಬೇಡ ಎಂದು ಹೇಳಿದ್ದಾರೆ. ಆದರೆ, ನವೆಂಬರ್ ವೇಳೆಗೆ ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಆ ವೇಳೆಗೆ ಸರ್ಜರಿ ಪ್ರಕ್ರಿಯೆ ಖಚಿತ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದು ಜನರ ವಿಶ್ವಾಸ ಗಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಪುನರ್ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಆಮೂಲಕ ಕಾಲ್ತುಳಿತ ಘಟನೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಪಕ್ಷದ ಹಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿಗೆ ಮುಂದಾಗಿದ್ದರು. ಸಚಿವರು ತಮ್ಮ ಸಚಿವಾಲಯದ ಸಾಧನೆಗಳನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ತೆಗೆದುಕೊಂಡು ದೆಹಲಿಗೆ ಭೇಟಿ ನೀಡಿದ್ದರೆ, ಸಚಿವ ಆಕಾಂಕ್ಷಿಗಳೂ ದೆಹಲಿ ಹಾದಿ ಹಿಡಿದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಸದ್ಯಕ್ಕೆ ಬದಲಾವಣೆ ಬೇಡ ಎನ್ನುವ ಮಾತನ್ನು ಕೇಂದ್ರ ನಾಯಕರ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.
The much-anticipated Karnataka cabinet reshuffle has been put on hold, with Chief Minister Siddaramaiah and Deputy Chief Minister D.K. Shivakumar successfully persuading the Congress high command to defer the exercise until the end of the year.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm