ಬ್ರೇಕಿಂಗ್ ನ್ಯೂಸ್
11-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ಸಚಿವ ಸಂಪುಟ ಪುನರ್ ರಚನೆಗೆ ಒಲವು ತೋರಿದ್ದ ದೆಹಲಿ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಮನವೊಲಿಸಿದ್ದು, ಸಂಪುಟ ಸರ್ಜರಿಯನ್ನು ವರ್ಷಾಂತ್ಯದ ವರೆಗೂ ಮುಂದಕ್ಕೆ ಹಾಕಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಿದ್ದಾರೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಕೇಂದ್ರ ನಾಯಕರನ್ನು ಒಪ್ಪಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸು ಕುಸಿದಿದ್ದು, ಇದರ ನಡುವೆ ಸಚಿವರ ಬದಲಾವಣೆ ದೋಷವನ್ನು ಒಪ್ಪಿಕೊಂಡಿದ್ದೇವೆಂಬ ಸಂದೇಶ ರವಾನಿಸುತ್ತದೆ. ಹೀಗಾಗಿ, ಸದ್ಯಕ್ಕೆ ಯಾವುದೇ ಬದಲಾವಣೆ ಬೇಡ ಎಂದು ಹೇಳಿದ್ದಾರೆ. ಆದರೆ, ನವೆಂಬರ್ ವೇಳೆಗೆ ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಆ ವೇಳೆಗೆ ಸರ್ಜರಿ ಪ್ರಕ್ರಿಯೆ ಖಚಿತ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದು ಜನರ ವಿಶ್ವಾಸ ಗಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಪುನರ್ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಆಮೂಲಕ ಕಾಲ್ತುಳಿತ ಘಟನೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಪಕ್ಷದ ಹಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿಗೆ ಮುಂದಾಗಿದ್ದರು. ಸಚಿವರು ತಮ್ಮ ಸಚಿವಾಲಯದ ಸಾಧನೆಗಳನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ತೆಗೆದುಕೊಂಡು ದೆಹಲಿಗೆ ಭೇಟಿ ನೀಡಿದ್ದರೆ, ಸಚಿವ ಆಕಾಂಕ್ಷಿಗಳೂ ದೆಹಲಿ ಹಾದಿ ಹಿಡಿದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಸದ್ಯಕ್ಕೆ ಬದಲಾವಣೆ ಬೇಡ ಎನ್ನುವ ಮಾತನ್ನು ಕೇಂದ್ರ ನಾಯಕರ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.
The much-anticipated Karnataka cabinet reshuffle has been put on hold, with Chief Minister Siddaramaiah and Deputy Chief Minister D.K. Shivakumar successfully persuading the Congress high command to defer the exercise until the end of the year.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm