ಬ್ರೇಕಿಂಗ್ ನ್ಯೂಸ್
11-06-25 09:35 pm HK News Desk ಕರ್ನಾಟಕ
ಹಾಸನ, ಜೂ.11 : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಯುವಜನರ ಸಂಖ್ಯೆ ಏರುತ್ತಿದ್ದು ಕಳೆದೆರಡು ತಿಂಗಳಲ್ಲಿ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ 19 ವರ್ಷದ ನಿಶಾಂತ್ ಎಂಬ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ತುತ್ತಾಗಿದ್ದಾನೆ.
ಹೊಳೆನರಸೀಪುರ ಪಟ್ಟಣದ ನಿವಾಸಿಗಳಾದ ಚನ್ನಕೇಶವ ಮತ್ತು ಜ್ಯೋತಿ ದಂಪತಿಯ ಪುತ್ರ ನಿಶಾಂತ್ (19) ಬೆಂಗಳೂರಿನ ಜೆಪಿ ನಗರದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ. ಡಿಪ್ಲೋಮಾ ವ್ಯಾಸಂಗ ಮುಗಿಸಿದ್ದ ನಿಶಾಂತ್, ಕೈಗಾರಿಕಾ ತರಬೇತಿಗಾಗಿ 15 ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಪಿಜಿಯಲ್ಲಿ ವಾಸವಿದ್ದ. ಜೂನ್ 11ರಂದು ಬೆಳಗ್ಗೆ ತನ್ನ ಕೋಣೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಬೆಳಗ್ಗೆ 10 ಗಂಟೆಯಾದರೂ ನಿಶಾಂತ್ ಬಾಗಿಲನ್ನು ತೆರೆಯದ ಕಾರಣ, ಸ್ನೇಹಿತರು ಬಾಗಿಲು ಒಡೆದು ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಅವನ ಪೋಷಕರು ಮೃತದೇಹವನ್ನು ಹಾಸನಕ್ಕೆ ತರಲಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಿಶಾಂತ್ ತಾಯಿ ಜ್ಯೋತಿ ಸಾವಿಗೀಡಾಗಿದ್ದರು.
ಹಾಸನದಲ್ಲಿ ಹೃದಯಾಘಾತ ಹೆಚ್ಚಳ
ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಐವರು ಯುವಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ ಕೆ.ವಿ., ಹೊಳೆನರಸೀಪುರದ ಮಡಿವಾಳ ಬಡಾವಣೆಯ ಸಂಧ್ಯಾ, ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ ಮತ್ತು ಹಾಸನ ತಾಲೂಕಿನ ಅಗಲಹಳ್ಳಿ ಕೊಪ್ಪಲು ಗ್ರಾಮದ ನವೀನ್ ಕುಮಾರ್ (21) ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ನಿಶಾಂತ್ ಸಾವು ಆತಂಕ ಹೆಚ್ಚಿಸಿದೆ.
In a concerning trend, Hassan district has witnessed a sharp rise in heart attack-related deaths among young people, with five reported fatalities in the last two months. The latest victim is 19-year-old Nishanth, a resident of Holenarasipura town, who died of a sudden heart attack in Bengaluru.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm