ಬ್ರೇಕಿಂಗ್ ನ್ಯೂಸ್
12-06-25 11:07 pm HK News Desk ಕರ್ನಾಟಕ
ಕಾರವಾರ, ಜೂ 12 : ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾರವಾರ ನಗರದಲ್ಲಿ ವ್ಯಾಪಕ ಹಾನಿಯಾಗಿದ್ದು, ಜಿಲ್ಲಾಸ್ಪತ್ರೆಗೆ ನೀರು ನುಗ್ಗಿದ್ದಲ್ಲದೆ ಹಲವು ಅಪಾರ್ಟ್ಮೆಂಟ್ಗಳಲ್ಲಿನ 20ಕ್ಕೂ ಹೆಚ್ಚು ಕಾರುಗಳು ಮುಳುಗಡೆಯಾಗಿವೆ. ಮಳೆಯ ಅಬ್ಬರಕ್ಕೆ ನಗರದ ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲಾಸ್ಪತ್ರೆಗೆ ನುಗ್ಗಿದ ನೀರು;
ಎಡಬಿಡದೆ ಸುರಿಯುತ್ತಿರುವ ಮಳೆಗೆ ನಗರದ ಜಿಲ್ಲಾ ಆಸ್ಪತ್ರೆಗೆ ಚರಂಡಿ ನೀರು ನುಗ್ಗಿದ್ದು, ರೋಗಿಗಳು ರಾತ್ರಿಯಿಡೀ ನೀರಿನಲ್ಲೇ ಕಾಲ ಕಳೆಯುವಂತಾಯಿತು. ಮಳೆಯಿಂದಾಗಿ ಆಸ್ಪತ್ರೆಯ ಕೆಳ ಮಹಡಿಯಲ್ಲಿ ನೀರು ತುಂಬಿಕೊಂಡ ಪರಿಣಾಮ ರೋಗಿಗಳು ಹಾಗೂ ಬಾಣಂತಿಯರು ತೀವ್ರ ಸಂಕಷ್ಟಕ್ಕೆ ಸಿಲುಕಿದರು. ಬೆಳಿಗ್ಗೆ ಆಗುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ನೀರು ಹೊರಹಾಕಲು ವ್ಯವಸ್ಥೆ ಮಾಡಿದರು. ಸದ್ಯ ಆಸ್ಪತ್ರೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಮೇಲಿನ ಮಹಡಿಗೆ ಸ್ಥಳಾಂತರಿಸಲಾಗಿದೆ.



ರಾತ್ರಿಯಿಡೀ ಸುರಿದ ಮಳೆಯು ರೋಗಿಗಳಿಗೆ ಭಾರಿ ತೊಂದರೆ ಉಂಟುಮಾಡಿದ್ದು, ಆಸ್ಪತ್ರೆಯ ಒಳಗೆ ನೀರು ನುಗ್ಗಿದ್ದರಿಂದ ಚಿಕಿತ್ಸೆಯಲ್ಲೂ ವ್ಯತ್ಯಯ ಉಂಟಾಯಿತು. ಮಳೆಗಾಲ ಆರಂಭವಾದರೂ ನಗರದ ಒಳಚರಂಡಿ ವ್ಯವಸ್ಥೆ ಸರಿಪಡಿಸದ ಕಾರಣ ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹಲವೆಡೆ ಅಪಾರ್ಟ್ಮೆಂಟ್ಗಳ ಪಾರ್ಕಿಂಗ್ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡು, ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ಮುಳುಗಿವೆ. ಕೆಇಬಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ಗಳಿಗೆ ಹೆಚ್ಚಿನ ಹಾನಿಯಾಗಿದೆ. ಜೊತೆಗೆ, ರಸ್ತೆ ಬದಿಯ ಹಲವಾರು ಅಂಗಡಿಗಳಿಗೂ ನೀರು ನುಗ್ಗಿದ್ದು, ಸಾಮಗ್ರಿಗಳು ಹಾನಿಗೊಳಗಾಗಿವೆ. ಕೋಳಿ ಅಂಗಡಿಯೊಂದಕ್ಕೆ ನೀರು ಆವರಿಸಿದ ಪರಿಣಾಮ ನೂರಕ್ಕೂ ಅಧಿಕ ಕೋಳಿಗಳು ಮೃತಪಟ್ಟಿವೆ. ಇದರಿಂದ ವ್ಯಾಪಾರಸ್ಥರಿಗೆ ಭಾರಿ ನಷ್ಟ ಉಂಟಾಗಿದೆ.
ಮನೆ ಕುಸಿತ, ಸಾಂಪ್ರದಾಯಿಕ ದೋಣಿಗಳು ಜಲಾವೃತ: ಕಾರವಾರದ ಬೈತಖೋಲ್ ಭಾಗದಲ್ಲಿ ಗುಡ್ಡದ ಮೇಲ್ಬಾಗದಿಂದ ಹರಿದುಬಂದ ಮಳೆ ನೀರಿನಿಂದಾಗಿ ಮನೆಯೊಂದರ ಗೋಡೆಗಳು ಕುಸಿದು ಕೊಚ್ಚಿಕೊಂಡು ಹೋಗಿದೆ. ರಾತ್ರಿ ವೇಳೆ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಕುಟುಂಬಸ್ಥರು ಅಪಾಯದಿಂದ ಪಾರಾಗಿದ್ದಾರೆ.
ಬೈತಖೋಲದ ಮಾಲಿನಿ ಫೆಡ್ನೇಕರ್ ಎಂಬವರ ಮನೆ ಕುಸಿದು ಹಾನಿಯಾಗಿದೆ. ಕುಟುಂಬದವರು ರಾತ್ರಿ ಮಲಗಿದ್ದಾಗಲೇ ಏಕಾಏಕಿ ಮಳೆ ನೀರು ಹರಿದುಬಂದಿದ್ದು ಅಪಾರ ಪ್ರಮಾಣದ ನೀರು ಮನೆಯ ಗೋಡೆಯನ್ನು ಕುಸಿಯುವಂತೆ ಮಾಡಿದೆ. ತಕ್ಷಣ ಮನೆಯಲ್ಲಿದ್ದವರು ಪಕ್ಕದ ಮನೆಗೆ ಓಡಿಹೋಗಿ ಅಪಾಯದಿಂದ ಪಾರಾಗಿದ್ದಾರೆ. ಮಳೆ ನೀರಿನಿಂದ ಮಣ್ಣು ಮತ್ತು ಕಲ್ಲುಗಳ ರಾಶಿ ಮನೆಯೊಳಗೆ ನುಗ್ಗಿ ಹಾನಿಯಾಗಿದೆ. ಸದ್ಯ ಪಕ್ಕದ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.
ನಗರದ ಅಲಿಗದ್ದಾ ಕಡಲತೀರದಲ್ಲಿ ನಿಲ್ಲಿಸಿದ್ದ ಸಾಂಪ್ರದಾಯಿಕ ಮೀನುಗಾರಿಕಾ ದೋಣಿಗಳು ಭಾರೀ ಮಳೆಗೆ ಮಣ್ಣಿನಲ್ಲಿ ಹುದುಗಿದ್ದ, ಹಲವು ಮೀನುಗಾರಿಕಾ ಬಲೆಗಳಿಗೂ ಹಾನಿಯಾಗಿದೆ. ಮೀನುಗಾರರು ತಮ್ಮ ದೋಣಿಗಳನ್ನು ರಕ್ಷಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ನಗರಸಭೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಪಾರ್ಟ್ಮೆಂಟ್ಗಳಲ್ಲಿನ ನೀರನ್ನು ಹೊರಹಾಕುವ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯೂ ರಕ್ಷಣಾ ಕಾರ್ಯಗಳಲ್ಲಿ ನೆರವಾಗುತ್ತಿದ್ದಾರೆ.
Sewage Water Floods Karwar District Hospital, Torrential Rains Cause Widespread Damage, House Collapses, Boats Submerged.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm