ಬ್ರೇಕಿಂಗ್ ನ್ಯೂಸ್
22-12-20 01:00 pm Headline Karnataka News Network ಕರ್ನಾಟಕ
ಕೋಲಾರ, ಡಿ.22 : ಉಜಿರೆಯ ಬಾಲಕನ ಅಪಹರಣ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಕೋಲಾರದಲ್ಲಿ ಬಂಧಿಸಿದ್ದರು. ಆದರೆ, ಆರೋಪಿಗಳ ಪೈಕಿ ಮಂಜುನಾಥ್ ಅಮಾಯಕ ಎನ್ನುವ ಕೂಗನ್ನು ಕೂರ್ನಹೊಸಹಳ್ಳಿ ಗ್ರಾಮಸ್ಥರು ಮುಂದಿಟ್ಟಿದ್ದಾರೆ. ಮಂಜುನಾಥ್ ಆರೋಪಿಯಾಗಿದ್ದಕ್ಕೆ ಆತನ ಕುಟುಂಬದವರು ಈಗ ಕಣ್ಣೀರಿಡುತ್ತಿದ್ದಾರೆ.
ಬಾಲಕನಿಗೆ ಆಶ್ರಯ ನೀಡಿದ್ದ ಮಂಜುನಾಥ್ ಅಮಾಯಕ. ಮಾಲೂರಿನ ಮಹೇಶ್ ಮಂಜುನಾಥ್ ಫೋನ್ ಬಳಸಿ ಕರೆ ಮಾಡಿದ್ದಾನೆ, ಅಷ್ಟೇ. ಈ ಪ್ರಕರಣಕ್ಕೂ ಮಂಜುನಾಥನಿಗೂ ಯಾವುದೇ ಸಂಬಂಧ ಇಲ್ಲ ಎಂದು ಕೋಲಾರದ ಮಾಲೂರಿನ ಕೂರ್ನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಮಗುವನ್ನು ಅಪಹರಣ ಮಾಡಿದವರ ಜೊತೆ ಮಂಜುನಾಥನಿಗೆ ಸಂಬಂಧವೇ ಇಲ್ಲ. ಕರೆ ಮಾಡಲು ಮಹೇಶನಿಗೆ ಮೊಬೈಲ್ ಕೊಟ್ಟಿದ್ದೇ ಮಂಜುನಾಥನಿಗೆ ಮುಳುವಾಯ್ತು. ಹೀಗಾಗಿ ಪ್ರಕರಣದಲ್ಲಿ ಮಹೇಶನ ಜೊತೆಗೆ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಗೆ ಪ್ರವಾಸ ಬಂದಿದ್ದೇವೆ. ನಿಮ್ಮ ಮನೆಯಲ್ಲಿ ಒಂದು ರಾತ್ರಿ ಇರುತ್ತೇವೆ ಎಂದು ಮಹೇಶನಿಗೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕಮಲ್ ಕರೆ ಮಾಡಿದ್ದ ಎಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ.


ಮಹೇಶ್ ಕೂರ್ನಹೊಸಳ್ಳಿ ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಇದ್ದಾಗ ಕಮಲ್ ಗ್ಯಾರೇಜ್ನಲ್ಲಿ ಈ ಮೊದಲು ಕೆಲಸ ಮಾಡುತ್ತಿದ್ದರು. ಆದ್ದರಿಂದ, ಇಬ್ಬರಿಗೂ ಚೆನ್ನಾಗಿ ಪರಿಚಯವಿತ್ತು. ಮಹೇಶ್ ಮತ್ತು ಮಂಜುನಾಥ್ ಪೋನ್ ಪೇಗೆ ಹಣವನ್ನು ಅಪಹರಣಕಾರರು ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮಂಜುನಾಥ್ ಆನ್ಲೈನ್ ಮೂಲಕ ಹಣವನ್ನು ತರಿಸಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಮಂಜುನಾಥ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳುತ್ತಾರೆ.
ಇದನ್ನೂ ಓದಿ: ಉಜಿರೆ ; ಬಾಲಕನ ಅಪಹರಿಸಿ 17 ಕೋಟಿ ಬೇಡಿಕೆ !! ಬಿಟ್ ಕಾಯಿನ್ ದಂಧೆ ಶಂಕೆ
ಬಾಲಕನ ಅಪಹರಣ ; ಡಿಮ್ಯಾಂಡ್ 10 ಕೋಟಿಗೆ ಇಳಿಕೆ, ಹಾಸನದಲ್ಲಿ ಲೊಕೇಶನ್ ಪತ್ತೆ !!
ಬಾಲಕನ ಅಪಹರಿಸಿ ಸಿಕ್ಕಿಬಿದ್ದ ಖದೀಮರು ; ಕೋಲಾರದಲ್ಲಿ ನಾಲ್ವರು ಅರೆಸ್ಟ್ ! ಬಾಲಕನ ರಕ್ಷಣೆ
Kidnappers who have been arrested in the Kidnap of Eight-year-old boy from Ujre one among the accused Manjunath is said to be innocent by the Villagers in Kolar.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm