ಬ್ರೇಕಿಂಗ್ ನ್ಯೂಸ್
17-06-25 05:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಯಾವ ಸಿನಿಮಾ ಪ್ರದರ್ಶಿಸಬೇಕು, ಯಾವುದನ್ನು ಪ್ರದರ್ಶಿಸಬಾರದು ಎಂಬುದನ್ನು ಗೂಂಡಾಗಳ ಗುಂಪು ನಿರ್ಧರಿಸಬಾರದು’ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದ ಚಿತ್ರಗಳನ್ನು ತಡೆಯುವ ಹಕ್ಕು ಯಾವುದೇ ಗುಂಪುಗಳಿಗೆ ಇಲ್ಲ ಎಂದು ಕೋರ್ಟ್ ಹೇಳಿದೆ.
ಕಮಲ್ ಹಾಸನ್ ನಟಿಸಿದ ಚಿತ್ರ 'ಥಗ್ ಲೈಫ್' ಪ್ರದರ್ಶನಕ್ಕೆ ಅಡ್ಡಿಪಡಿಸುವ ಗುಂಪುಗಳಿಂದ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಗೆ ಒಪ್ಪಿಗೆ ನೀಡಿದೆ. ಅಲ್ಲದೆ, ಚಿತ್ರವನ್ನು ಬಿಡುಗಡೆ ಮಾಡಬಾರದು ಅಂತ ಹೇಳುವಂತಿಲ್ಲ. ಇಷ್ಟ ಇಲ್ಲದಿದ್ದರೆ ನೋಡದೇ ಇರಬಹುದು. ಭಾಷೆಯ ವಿಚಾರದ ಕುರಿತು ಚರ್ಚೆ ಜನರ ನಡುವೆ ಇರಬಹುದು, ಹಾಗಂತ ಆತ ನಟಿಸಿದ ಚಿತ್ರ ಪ್ರದರ್ಶನ ಮಾಡುವಂತಿಲ್ಲ ಎಂದು ಹೇಳುವ ಹಾಗಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಸಂಬಂಧಿಸಿ ಚಿತ್ರ ಮಂದಿರಗಳಿಗೆ ರಕ್ಷಣೆ ನೀಡುವ ಕುರಿತಾಗಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಮನಮೋಹನ್ ಅವರಿದ್ದ ಪೀಠವು, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನುಮೋದಿಸಿದ ಪ್ರತಿ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿಸಬೇಕು ಮತ್ತು ಈ ಬಗ್ಗೆ ಯಾವುದೇ ಗುಂಪು ತಡೆಯುವುದಕ್ಕೆ ಅವಕಾಶ ನೀಡಬಾರದು ಎಂದು ಕಾನೂನು ಹೇಳುತ್ತದೆ ಎಂದು ಹೇಳಿದೆ.
ಚಿತ್ರದ ಕುರಿತಾಗಿ ಕರ್ನಾಟಕ ಹೈಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠ ಆದೇಶಿಸಿದೆ. ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳುವ ಮೂಲಕ ವಿವಾದ ಮೈಗೆಳೆದುಕೊಂಡಿದ್ದರು. ಇದರ ಬೆನ್ನಲ್ಲೇ ಕನ್ನಡ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಲ್ಲದೆ ಭಾರೀ ವಿವಾದ ಸೃಷ್ಟಿಸಿದ್ದವು.
ಸಿನಿಮಾ ರಿಲೀಸ್ ನಿರಾಕರಿಸಿದ ಹಂಚಿಕೆದಾರ !
ಆದರೆ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಮಾಡಲು ಕಂಟ್ರಾಕ್ಟ್ ಪಡೆದಿದ್ದ ಹಂಚಿಕೆದಾರ ವೆಂಕಟೇಶ್ , ಸಿನಿಮಾ ರಿಲೀಸ್ ಮಾಡದಿರಲು ನಿರ್ಧರಿಸಿದ್ದಾರೆ. 8 ಕೋಟಿ ರೂ.ಗೆ ಹಂಚಿಕೆ ಮಾಡಲು ಒಪ್ಪಿಕೊಂಡಿದ್ದರು. ‘ನಾನು ಈಗ ಸಿನಿಮಾ ರಿಲೀಸ್ ಮಾಡುವುದಿಲ್ಲ. ಈಗಾಗಲೇ ಅಡ್ವಾನ್ಸ್ ಕೊಟ್ಟು ಸಿನಿಮಾ ಖರೀದಿ ಮಾಡಿದ್ದೆ. ಆ ಹಣ ಇನ್ನೂ ನನಗೆ ವಾಪಾಸ್ ಬಂದಿಲ್ಲ. ಅದರ ಓಡಾಟದಲ್ಲಿ ಇದ್ದೇನೆ’ ಎಂದು ಹೇಳಿದ್ದಾರೆ.
The Supreme Court on Tuesday slammed the Karnataka government and asked it to allow the release of Tamil superstar Kamal Haasan's film 'Thug Life', stating that it cannot allow mobs and vigilantes to take over the streets.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm