ಬ್ರೇಕಿಂಗ್ ನ್ಯೂಸ್
20-06-25 10:36 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ರಾಜ್ಯ ಸರ್ಕಾರದ ಗುತ್ತಿಗೆಯಲ್ಲಿ ಮೀಸಲು ಹೆಚ್ಚಿಸಿದ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯು ಜಾರಿಗೆ ತರುತ್ತಿರುವ ವಿವಿಧ ವಸತಿ ಯೋಜನೆಯಲ್ಲಿ, ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.
ರಾಜ್ಯದ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಸಂಖ್ಯೆಯ ಜನ ವಸತಿ ರಹಿತರಾಗಿದ್ದು, ಇದನ್ನು ಗಮನಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ ನಂತರ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿ ಮಸೂದೆ ತರಲು ಮುಂದಾಗಿದ್ದು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ್ ಇದೇ ವೇಳೆ ತಿಳಿಸಿದ್ದಾರೆ.
ಅಲ್ಲದೆ, ತಪ್ಪು ಮಾಹಿತಿ ಅಥವಾ ನಕಲಿ ಸುದ್ದಿಗಳ ವಿರುದ್ಧದ ಮಸೂದೆಗಳು ಮತ್ತು ದ್ವೇಷ ಭಾಷಣಗಳು ಮತ್ತು ಅಪರಾಧಗಳ ಮಸೂದೆ ಕೂಡ ಚರ್ಚೆಗೆ ಬರುವ ಸಾಧ್ಯತೆಯಿದೆ. ಇಂದು ನಾಲ್ಕು ಮಸೂದೆಗಳನ್ನು ಪ್ರಸ್ತಾಪಿಸಿದ್ದು ಕರ್ನಾಟಕ ಜನಸಂದಣಿ ನಿಯಂತ್ರಣ ಮತ್ತು ಸಾಮೂಹಿಕ ಸಭೆ ನಡೆಯುವ ಸ್ಥಳ ಮಸೂದೆ, 2025; ಕರ್ನಾಟಕ ರೋಹಿತ್ ವೇಮುಲಾ ಮಸೂದೆ, 2025; ಕರ್ನಾಟಕ ತಪ್ಪು ಮಾಹಿತಿ, ನಕಲಿ ಸುದ್ದಿ ನಿಷೇಧ ಮಸೂದೆ, 2025; ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆಗಟ್ಟುವಿಕೆ ಮಸೂದೆ, 2025," ಎಂದು ಪಾಟೀಲ್ ತಿಳಿಸಿದ್ದಾರೆ.
Minority Housing Quota Increased from 10 to 15 percent in Karnataka, Cabinet Led by CM Siddaramaiah Approves Key Decision
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm