ಬ್ರೇಕಿಂಗ್ ನ್ಯೂಸ್
20-06-25 10:36 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ರಾಜ್ಯ ಸರ್ಕಾರದ ಗುತ್ತಿಗೆಯಲ್ಲಿ ಮೀಸಲು ಹೆಚ್ಚಿಸಿದ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯು ಜಾರಿಗೆ ತರುತ್ತಿರುವ ವಿವಿಧ ವಸತಿ ಯೋಜನೆಯಲ್ಲಿ, ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.
ರಾಜ್ಯದ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಸಂಖ್ಯೆಯ ಜನ ವಸತಿ ರಹಿತರಾಗಿದ್ದು, ಇದನ್ನು ಗಮನಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ ನಂತರ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿ ಮಸೂದೆ ತರಲು ಮುಂದಾಗಿದ್ದು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ್ ಇದೇ ವೇಳೆ ತಿಳಿಸಿದ್ದಾರೆ.
ಅಲ್ಲದೆ, ತಪ್ಪು ಮಾಹಿತಿ ಅಥವಾ ನಕಲಿ ಸುದ್ದಿಗಳ ವಿರುದ್ಧದ ಮಸೂದೆಗಳು ಮತ್ತು ದ್ವೇಷ ಭಾಷಣಗಳು ಮತ್ತು ಅಪರಾಧಗಳ ಮಸೂದೆ ಕೂಡ ಚರ್ಚೆಗೆ ಬರುವ ಸಾಧ್ಯತೆಯಿದೆ. ಇಂದು ನಾಲ್ಕು ಮಸೂದೆಗಳನ್ನು ಪ್ರಸ್ತಾಪಿಸಿದ್ದು ಕರ್ನಾಟಕ ಜನಸಂದಣಿ ನಿಯಂತ್ರಣ ಮತ್ತು ಸಾಮೂಹಿಕ ಸಭೆ ನಡೆಯುವ ಸ್ಥಳ ಮಸೂದೆ, 2025; ಕರ್ನಾಟಕ ರೋಹಿತ್ ವೇಮುಲಾ ಮಸೂದೆ, 2025; ಕರ್ನಾಟಕ ತಪ್ಪು ಮಾಹಿತಿ, ನಕಲಿ ಸುದ್ದಿ ನಿಷೇಧ ಮಸೂದೆ, 2025; ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆಗಟ್ಟುವಿಕೆ ಮಸೂದೆ, 2025," ಎಂದು ಪಾಟೀಲ್ ತಿಳಿಸಿದ್ದಾರೆ.
Minority Housing Quota Increased from 10 to 15 percent in Karnataka, Cabinet Led by CM Siddaramaiah Approves Key Decision
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm