ಬ್ರೇಕಿಂಗ್ ನ್ಯೂಸ್
22-06-25 07:52 pm HK News Desk ಕರ್ನಾಟಕ
ಹಾಸನ, ಜೂ 22: ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ ಲಕ್ಷಣ ಇದೆ. ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಫೋಟ, ಯುದ್ಧ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ. ಇದು ರಾಜ್ಯಕ್ಕೂ ಇದೆ, ದೇಶಕ್ಕೂ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಎರಡು ಮೂರು ಜನ ಪ್ರಧಾನ ಮಂತ್ರಿಗಳು ಕೊಲೆ ಆಗ್ತಾರೆ ಅಂಥ ಹೇಳಿದ್ದೆ ಅದು ಆಗುತ್ತದೆ. ಯುದ್ಧ ನಿಲ್ಲೋದು ಸಂವತ್ಸರ ಪರದಲ್ಲಿ ಕಷ್ಟ. ದ್ವೇಷ, ಅಸೂಯೆ ಮಧ್ಯೆ ಒಂದಿಬ್ಬರು ಬಲಿಯಾಗುತ್ತಾರೆ. ಊಹಿಸಲಾರದ ದುಃಖ ಈ ಭಾರತಕ್ಕೆ ಬರುತ್ತದೆ.
ಪ್ರಕೃತಿದತ್ತವಾಗಿ ಮೇಘ ಸ್ಪೋಟ ಆಗುತ್ತೆ. ಜನಜೀವನ ಅಸ್ಥಿರವಾಗುತ್ತೆ, ಇನ್ನೂ ಜಾಸ್ತಿ ಆಗುತ್ತೆ. ಯಾವಾಗ ಮನೆಗೆ ಬರ್ತಾರೆ ಹೋಗ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ ಶ್ರೀಗಳು, ಸಿದ್ದರಾಮಯ್ಯ ಅವರಿಗೆ ಏನೂ ತೊಂದರೆ ಇಲ್ಲ ಎಂದಿದ್ದಾರೆ.
ಮೋಡ ಬರುತ್ತೆ ಮೋಡ ಹೋಗುತ್ತೆ ಅಷ್ಟೇ. ಸಂಕ್ರಾಂತಿ ಒಳಗೆ ಮೇಘ ಸ್ಫೋಟ ಆಗುವ ಸಾಧ್ಯತೆ ಇದೆ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರ ಇದೆ. ಅಕಾಲದಲ್ಲಿ ಮಳೆ ಬಂದರೆ ಸಕಾಲದಲ್ಲಿ ತೊಂದರೆ ಆಗಲಿದೆ. ಈ ಬಾರಿ ಮಳೆ ಚೆನ್ನಾಗಿ ಆಗಲಿದೆ, ಮತ್ತೆ ಜಲಸ್ಫೋಟ ಆಗಲಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎಂದು ಹೇಳಿದ್ದೆ, ಅದು ಆಗಲಿದೆ.
ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ.. ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಒಗಟಾಗಿ ಹೇಳಿದ ಶ್ರೀಗಳು, ಇದರ ಅರ್ಥವನ್ನು ಮುಂದೆ ಹೇಳುತ್ತೇನೆ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ಕೊರೊನಾ ಇನ್ನೊಂದು ರೂಪ ತಾಳಲಿದೆ. ಸಾವು ನೋವು ಕಡಿಮೆ ಇದ್ದರೂ ಸಮಸ್ಯೆ ಇದ್ದೇ ಇದೆ. ಕೆಲವು ದೇಶಗಳು ಮುಳುಗುತ್ತವೆ, ಕೆಲವು ದೇಶಗಳು ಏಳ್ತವೆ. ವಾಯು ಪ್ರಳಯ, ಭೂ ಪ್ರಳಯವಾಗುತ್ತೆ ಎಂದು ದೇಶ ರಾಜ್ಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
Renowned spiritual leader Kodi Sri has made a startling prediction, warning of major political upheaval in the state following the Sankranti festival. He claimed that dark clouds loom over the royal palace, suggesting a crisis not just for the state but for the entire nation. In an even more explosive statement, he prophesied that 2 to 3 Prime Ministers could be assassinated during this turbulent period.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm