ಬ್ರೇಕಿಂಗ್ ನ್ಯೂಸ್
24-06-25 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.24 : ಶಿವಮೊಗ್ಗ, ಧಾರವಾಡ, ಬೆಂಗಳೂರು, ಚಿಕ್ಕಮಗಳೂರು, ಗದಗ ಸೇರಿದಂತೆ ಎಂಟಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಪರಿಶೀಲನೆ ನಡೆಸಿದ್ದು ದಾಳಿ ವೇಳೆ ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ.
ಅಕೌಂಟೆಂಟ್ ಮನೆಯಲ್ಲಿ ಕೋಟಿ ಕೋಟಿ ಆಸ್ತಿ!
ಚಿಕ್ಕಮಗಳೂರು ನಗರಸಭೆ ಅಕೌಂಟ್ ಆಫೀಸರ್ ಲತಾಮಣಿ ಮನೆ ಮೇಲೆ ಲೋಕಾ ರೇಡ್ ನಡೆದಿದೆ. ಲತಾಮಣಿ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ. 300 ಗ್ರಾಂ ಚಿನ್ನ ,1 ಕೆ.ಜಿ ಬೆಳ್ಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ತೆಯಾಗಿರುವ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಜಯನಗರದ ಲತಾಮಣಿ ನಿವಾಸದಲ್ಲಿ ಶೋಧ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗ್ತಿದೆ. ಕಳೆದ 8 ವರ್ಷದಿಂದ ನಗರಸಭೆಯಲ್ಲಿ ಲತಾ ಮಣಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲತಾ ಮಣಿ ಅವರ ಪತಿ ಚಂದ್ರಶೇಖರ್ ಕೂಡ ಸರ್ಕಾರಿ ಅಧಿಕಾರಿ ಆಗಿದ್ದು, ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.
ಟೌನ್ ಸಿಪಿಐ ಮನೆ ಮೇಲೆ ರೇಡ್
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ಪೊಲೀಸ್ ಠಾಣೆಯ ಟೌನ್ ಸಿಪಿಐ ಡಿ.ಬಿ ಪಾಟೀಲ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಶಹರ ಪೊಲೀಸ್ ಠಾಣೆ ಹಾಗೂ ಮನೆಗಳಲ್ಲಿ ಪರಿಶೀಲನೆ ನಡೆಸಲಾಗ್ತಿದೆ. ಸಿಪಿಐ ಡಿಬಿ ಪಾಟೀಲ ಮನೆಯಲ್ಲಿ ಮೂರು ಲಕ್ಷ ನಗದು ಪತ್ತೆಯಾಗಿದೆ. ಸಿಪಿಐ ಡಿ ಬಿ ಪಾಟೀಲ್ ಗೆ ಸೇರಿದ ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳಲ್ಲೂ ಪರಿಶೀಲನೆ ನಡೆಸಲಾಗ್ತಿದೆ.
ಬೆಳಗಾವಿಯಲ್ಲಿ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಅಶೋಕ ವಸಂತ್ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದ್ದು, ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಹಾಗೂ ಒಂದೂವರೆ ಲಕ್ಷ ನಗದು ಪತ್ತೆಯಾಗಿದೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅಧಿಕಾರಿ ಮನೆ ಹಾಗೂ ಧಾರವಾಡ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
In a major crackdown on alleged corruption, Lokayukta officials conducted simultaneous raids across more than eight locations in Karnataka, including Bengaluru, Shivamogga, Dharwad, Chikkamagaluru, Gadag, and Belagavi. The raids targeted the homes and offices of several government officials suspected of possessing disproportionate assets.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm