ಬ್ರೇಕಿಂಗ್ ನ್ಯೂಸ್
24-06-25 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.24 : ಶಿವಮೊಗ್ಗ, ಧಾರವಾಡ, ಬೆಂಗಳೂರು, ಚಿಕ್ಕಮಗಳೂರು, ಗದಗ ಸೇರಿದಂತೆ ಎಂಟಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಪರಿಶೀಲನೆ ನಡೆಸಿದ್ದು ದಾಳಿ ವೇಳೆ ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ.
ಅಕೌಂಟೆಂಟ್ ಮನೆಯಲ್ಲಿ ಕೋಟಿ ಕೋಟಿ ಆಸ್ತಿ!
ಚಿಕ್ಕಮಗಳೂರು ನಗರಸಭೆ ಅಕೌಂಟ್ ಆಫೀಸರ್ ಲತಾಮಣಿ ಮನೆ ಮೇಲೆ ಲೋಕಾ ರೇಡ್ ನಡೆದಿದೆ. ಲತಾಮಣಿ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ. 300 ಗ್ರಾಂ ಚಿನ್ನ ,1 ಕೆ.ಜಿ ಬೆಳ್ಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ತೆಯಾಗಿರುವ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಜಯನಗರದ ಲತಾಮಣಿ ನಿವಾಸದಲ್ಲಿ ಶೋಧ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗ್ತಿದೆ. ಕಳೆದ 8 ವರ್ಷದಿಂದ ನಗರಸಭೆಯಲ್ಲಿ ಲತಾ ಮಣಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲತಾ ಮಣಿ ಅವರ ಪತಿ ಚಂದ್ರಶೇಖರ್ ಕೂಡ ಸರ್ಕಾರಿ ಅಧಿಕಾರಿ ಆಗಿದ್ದು, ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.





ಟೌನ್ ಸಿಪಿಐ ಮನೆ ಮೇಲೆ ರೇಡ್
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ಪೊಲೀಸ್ ಠಾಣೆಯ ಟೌನ್ ಸಿಪಿಐ ಡಿ.ಬಿ ಪಾಟೀಲ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಶಹರ ಪೊಲೀಸ್ ಠಾಣೆ ಹಾಗೂ ಮನೆಗಳಲ್ಲಿ ಪರಿಶೀಲನೆ ನಡೆಸಲಾಗ್ತಿದೆ. ಸಿಪಿಐ ಡಿಬಿ ಪಾಟೀಲ ಮನೆಯಲ್ಲಿ ಮೂರು ಲಕ್ಷ ನಗದು ಪತ್ತೆಯಾಗಿದೆ. ಸಿಪಿಐ ಡಿ ಬಿ ಪಾಟೀಲ್ ಗೆ ಸೇರಿದ ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳಲ್ಲೂ ಪರಿಶೀಲನೆ ನಡೆಸಲಾಗ್ತಿದೆ.
ಬೆಳಗಾವಿಯಲ್ಲಿ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಅಶೋಕ ವಸಂತ್ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದ್ದು, ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಹಾಗೂ ಒಂದೂವರೆ ಲಕ್ಷ ನಗದು ಪತ್ತೆಯಾಗಿದೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅಧಿಕಾರಿ ಮನೆ ಹಾಗೂ ಧಾರವಾಡ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
In a major crackdown on alleged corruption, Lokayukta officials conducted simultaneous raids across more than eight locations in Karnataka, including Bengaluru, Shivamogga, Dharwad, Chikkamagaluru, Gadag, and Belagavi. The raids targeted the homes and offices of several government officials suspected of possessing disproportionate assets.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm