ಬ್ರೇಕಿಂಗ್ ನ್ಯೂಸ್
25-06-25 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 25 : ಬೆಂಗಳೂರು, ಉಡುಪಿ ಸೇರಿ ಹಲವಾರು ಶಿಕ್ಷಣ ಸಂಸ್ಥೆ, ಆಸ್ಪತ್ರೆ ಸೇರಿ ದೇಶದ 11 ರಾಜ್ಯಗಳ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಯುವತಿಯನ್ನು ಪೊಲೀಸರು ಬಂಧಿಸಿದ್ದು ತನ್ನ ಸ್ನೇಹಿತ ಮದುವೆಯಾಗಲು ಒಪ್ಪದೇ ಇದ್ದುದಕ್ಕಾಗಿ ಈ ರೀತಿ ಮಾಡಿದ್ದೇನೆಂದು ಹೇಳಿ ಅಚ್ಚರಿ ಮೂಡಿಸಿದ್ದಾಳೆ. ತಮಿಳುನಾಡಿನ ಚೈನ್ನೈ ಮೂಲದ ರೀನಾ ಜೊಶಿಲ್ಡಾ ಎಂಬಾಕೆ ಬಂಧಿತ ಯುವತಿ.
ಗುಜರಾತಿನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ. ಚೆನ್ನೈಯಲ್ಲಿ ಎಂಎನ್ಸಿ ಕಂಪನಿ ಡೆಲಾಯಿಟ್ ಉದ್ಯೋಗಿಯಾದ ರೀನಾ ಜೊಶಿಲ್ಡಾ ಹುಸಿ ಬಾಂಬ್ ಬೆದರಿಕೆ ಹಾಕಿ ಸಿಕ್ಕಿಬಿದ್ದಿದ್ದಾಳೆ. ಜೋಶಿಲ್ಡಾ ತನ್ನ ಸಹೋದ್ಯೋಗಿ ದಿವಿಜ್ ಪ್ರಭಾಕರ್ ಎಂಬಾತನ್ನು ಪ್ರೀತಿಸುತ್ತಿದ್ದಳು. ಆದರೆ ಆತ ಈಕೆಯ ಪ್ರೀತಿಯನ್ನು ನಿರಾಕರಿಸಿದ್ದಲ್ಲದೆ, ಮದುವೆ ಆಗೋದಕ್ಕೂ ನಿರಾಕರಣೆ ಮಾಡಿದ್ದ. ಕಾನ್ಪರೆನ್ಸ್ ಮೀಟಿಂಗ್ ನಲ್ಲಿ ದಿವಿಜ್ ಭೇಟಿಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಭೇಟಿಯಾಗಿ ತಿಳಿಸಿದ್ದಳು. ಆದರೆ ದಿವಿಜ್ ಎಲ್ಲದಕ್ಕೂ ನಿರಾಕರಣೆ ಮಾಡಿದ್ದು ಈಕೆಯ ಸಿಟ್ಟಿಗೆ ಕಾರಣವಾಗಿತ್ತು. ಬಳಿಕ ದಿವಿಜ್ ಜೊತೆ ಮದುವೆಯಾದ ರೀತಿ ಫೋಟೋಗಳನ್ನು ಸೃಷ್ಟಿಸಿ ಜಾಲತಾಣದಲ್ಲಿ ಹಾಕಿದ್ದಳು. ಇದರಿಂದ ಬೇಸತ್ತ ದಿವಿಜ್ ಪ್ರಭಾಕರ್ ಸೈಬರ್ ಪೊಲೀಸರಿಗೆ ಕಂಪ್ಲೆಂಟ್ ಕೊಟ್ಟಿದ್ದ.
ಈ ನಡುವೆ, ದಿವಿಜ್ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದು ಸುದ್ದಿ ತಿಳಿದ ಜೋಶಿಲ್ಡಾ ಸಿಟ್ಟುಗೊಂಡು ಕಳೆದ ಫೆಬ್ರವರಿ ಮತ್ತು ಜೂನ್ ತಿಂಗಳ ನಡುವೆ ದೇಶದ ಹಲವಾರು ಸಂಸ್ಥೆಗಳ ಮಾಹಿತಿ ಪಡೆದು ಹುಸಿ ಬೆದರಿಕೆ ಹಾಕಿದ್ದಳು. ಗುಜರಾತ್, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ 12 ರಾಜ್ಯಗಳ ಶಿಕ್ಷಣ ಸಂಸ್ಥೆಗಳು, ಕ್ರೀಡಾಂಗಣಗಳು ಮತ್ತು ಆಸ್ಪತ್ರೆಗಳಿಗೆ ದಿವಿಜ್ ಹೆಸರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ಗಳನ್ನು ಕಳುಹಿಸಿದ್ದಳು.
ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಳು. ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ಪಡೆಯಲು ಉಡುಪಿ ಪೊಲೀಸರು ಮುಂದಾಗಿದ್ದಾರೆ. ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ದೇಶಾದ್ಯಂತ 21 ಸಂಸ್ಥೆಗಳಿಗೆ ಈಕೆಯ ಕಡೆಯಿಂದ ಹುಸಿ ಬೆದರಿಕೆಯ ಸಂದೇಶ ಹೋಗಿದ್ದು ಈ ಪೈಕಿ ಒಂದರಲ್ಲಿ ಇತ್ತೀಚೆಗೆ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ಮಾಡಿಸಿದ್ದು ನಾನೇ ಅಂತಲೂ ಬರೆದುಕೊಂಡಿದ್ದಳು.
In a bizarre case that has left authorities stunned, a woman from Tamil Nadu was arrested for allegedly sending fake bomb threat emails to 21 institutions across 11 Indian states, all in the name of her former colleague who had declined her proposal for marriage.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm