ಬ್ರೇಕಿಂಗ್ ನ್ಯೂಸ್
29-06-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29 : ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜಿನಾಮೆಯನ್ನು ಆಡಳಿತ ಮಂಡಳಿ ಅಂಗೀಕರಿಸಿದೆ. ನಿರ್ದಿಷ್ಟ ವೆಚ್ಚಕ್ಕೆ ಸಂಬಂಧಿಸಿ ಆಡಳಿತ ಮಂಡಳಿಯ ಜೊತೆಗೆ ತಲೆದೋರಿದ್ದ ಬಿಕ್ಕಟ್ಟು ತೀವ್ರತೆ ಪಡೆದುಕೊಂಡ ನಂತರ ಸಿಇಓ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯ ನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಕೂಡ ಜುಲೈ 30ರೊಳಗೆ ಕೆಳಗಿಳಿಯುವ ಸಾಧ್ಯತೆ ಇದೆ.
ಕರ್ಣಾಟಕ ಬ್ಯಾಂಕ್ ಮಾಡಿದ ಒಂದು ನಿರ್ದಿಷ್ಟ ವೆಚ್ಚದ ಕುರಿತು ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಶೇಖರ್ ರಾವ್ ಹಾಗೂ ಬ್ಯಾಂಕಿನ ಆಡಳಿತ ಮಂಡಳಿಯ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಈ ಹೊಯ್ದಾಟವೀಗ ಬ್ಯಾಂಕಿನ ಅತ್ಯುನ್ನತ ಹುದ್ದೆಯಲ್ಲಿದ್ದವರು ರಾಜೀನಾಮೆ ನೀಡುವ ಹಂತಕ್ಕೆ ಬಂದಿದೆ.
ಕಳೆದ ಮೇ ತಿಂಗಳಲ್ಲಿ ಅಡಿಟ್ ರಿಪೋರ್ಟ್ ಸಂದರ್ಭದಲ್ಲಿ, ಬ್ಯಾಂಕಿನ ಪೂರ್ಣಾವಧಿ ನಿರ್ದೇಶಕರ ಅಧಿಕಾರವನ್ನು ಮೀರಿ ಇತರ ಉದ್ದೇಶಗಳಿಗಾಗಿ ಮಾಡಿದ 1.53 ಕೋಟಿ ರೂ. ವೆಚ್ಚದ ಬಗ್ಗೆ ಉಲ್ಲೇಖಿಸಲಾಗಿತ್ತು. ಇದಕ್ಕೆ ಆಡಳಿತ ಮಂಡಳಿಯ ಅನುಮೋದನೆ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಸಿಇಒ, ಕಾರ್ಯ ನಿರ್ವಾಹಕ ನಿರ್ದೇಶಕರು ಮತ್ತು ಆಡಳಿತ ನಡುವೆ ವ್ಯತ್ಯಾಸಗಳು ಹುಟ್ಟಿಕೊಂಡಿದ್ದವು. 'ಈ ಮೊತ್ತವನ್ನು ಸಂಬಂಧಪಟ್ಟ ನಿರ್ದೇಶಕರಿಂದ ವಸೂಲಿ ಮಾಡಬಹುದು' ಎಂದು ಲೆಕ್ಕಪರಿಶೋಧಕರು ಹೇಳಿದ್ದರಿಂದ ಬಿಸಿ ತಾರಕಕ್ಕೇರಿತ್ತು.
ವೆಚ್ಚದ ಬಗ್ಗೆ ಸಿಇಓ ಹರಿಹರ ಶರ್ಮಾ ಸೂಕ್ತ ಸ್ಪಷ್ಟನೆ ನೀಡಲು ಸಾಧ್ಯವಾಗದೆ, ಅದು ಸಿಲ್ಲಿ ಮ್ಯಾಟರ್ ಎಂದಿದ್ದರು. ಇದೇ ವಿಚಾರದಲ್ಲಿ ಹುಟ್ಟಿಕೊಂಡಿದ್ದ ವಿವಾದ ಇದೀಗ ಇಬ್ಬರ ಹುದ್ದೆಯನ್ನು ಬಲಿ ಪಡೆಯುವ ಹಂತಕ್ಕೆ ತಲುಪಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕಿನ ಲಾಭದಲ್ಲಿಯೂ ಕಡಿಮೆಯಾಗಿರುವುದು ಸಿಇಓ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕರ ತಲೆಗೆ ಬಂದಿತ್ತು. ಇದರ ನಡುವೆ ಅನಗತ್ಯ ವೆಚ್ಚ ಎಂದು ಅಡಿಟರ್ಸ್ ಪಟ್ಟಿ ಮಾಡಿರುವುದು ಬ್ಯಾಂಕಿನ ಆಡಳಿತದಲ್ಲಿ ಸಂಚಲನ ಮೂಡಿಸಿತ್ತು.
Srikrishnan Hari Hara Sarma, the Managing Director and Chief Executive Officer of Karnataka Bank, has resigned from his position following internal disagreements with the bank’s board over financial decisions. The board has accepted his resignation.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm