ಬ್ರೇಕಿಂಗ್ ನ್ಯೂಸ್
30-06-25 11:04 am HK News Desk ಕರ್ನಾಟಕ
ತುಮಕೂರು, ಜೂ 30 : ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ.
ಮೃತರೆಲ್ಲರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನು ಹಾಸ್ಟೆಲ್ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತ ಸೀಬೆಗೌಡ ಅವರಿಗೆ ಮೂವರು ಮಕ್ಕಳು. ವರ್ಣಶ್ರೀ, ದುಂಬಿಶ್ರೀ, ಭಾನುಕಿರಣ್ ಗೌಡ.
ಮೃತ ಸಿಬೇಗೌಡ ಅವರ ಮಗ ಭಾನುಕಿರಣ್ ಗೌಡ ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ನಲ್ಲಿ 8ನೇ ತರಗತಿ ಓದುತ್ತಿದ್ದ. ಭಾನುವಾರ ರಜೆ ಹಿನ್ನೆಲೆ ಮನೆಗೆ ಮಗ ಬಂದಿದ್ದ. ನಿನ್ನೆ ಊಟ ಮುಗಿಸಿ ಮಗನನ್ನು ಶಾಲೆಯ ಹಾಸ್ಟೆಲ್ಗೆ ಬಿಟ್ಟು ಬರಲು ಮಗ ಭಾನುಕಿರಣ್ನೊಂದಿಗೆ ಸಿಬೇಗೌಡ, ಅವರ ಪತ್ನಿ ಶೋಭಾ, 2ನೇ ಮಗಳು ದುಂಬಿಶ್ರೀ ಹೊರಟಿದ್ದರು.


ಮೃತ ಸಿಬೇಗೌಡರು ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ, ಕುಣಿಗಲ್ ಬೈಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಲು ಒನ್ ವೇಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರಿಯ ಮಗಳು ವರ್ಣಶ್ರೀ ಬೆಂಗಳೂರಿನ ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಾರೆ. ದುಂಬಿಶ್ರೀ, ಬೆಂಗಳೂರಿನ ಗ್ಲೋಬಲ್ ಕಾಲೇಜಿನಲ್ಲಿ ಓದುತ್ತಿದ್ದರು. ಮಗನನ್ನು ಕರೆದುಕೊಂಡು ಹೋಗುವ ಮೊದಲು ಹಿರಿಯ ಮಗಳು ವರ್ಣಶ್ರೀಯನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು.
ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking accident, four members of a single family lost their lives in a car and canter collision on National Highway 75 near the Kunigal bypass in Tumakuru district. The victims were returning after dropping their son at a school hostel.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm