ಬ್ರೇಕಿಂಗ್ ನ್ಯೂಸ್
30-06-25 11:04 am HK News Desk ಕರ್ನಾಟಕ
ತುಮಕೂರು, ಜೂ 30 : ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ.
ಮೃತರೆಲ್ಲರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನು ಹಾಸ್ಟೆಲ್ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತ ಸೀಬೆಗೌಡ ಅವರಿಗೆ ಮೂವರು ಮಕ್ಕಳು. ವರ್ಣಶ್ರೀ, ದುಂಬಿಶ್ರೀ, ಭಾನುಕಿರಣ್ ಗೌಡ.
ಮೃತ ಸಿಬೇಗೌಡ ಅವರ ಮಗ ಭಾನುಕಿರಣ್ ಗೌಡ ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ನಲ್ಲಿ 8ನೇ ತರಗತಿ ಓದುತ್ತಿದ್ದ. ಭಾನುವಾರ ರಜೆ ಹಿನ್ನೆಲೆ ಮನೆಗೆ ಮಗ ಬಂದಿದ್ದ. ನಿನ್ನೆ ಊಟ ಮುಗಿಸಿ ಮಗನನ್ನು ಶಾಲೆಯ ಹಾಸ್ಟೆಲ್ಗೆ ಬಿಟ್ಟು ಬರಲು ಮಗ ಭಾನುಕಿರಣ್ನೊಂದಿಗೆ ಸಿಬೇಗೌಡ, ಅವರ ಪತ್ನಿ ಶೋಭಾ, 2ನೇ ಮಗಳು ದುಂಬಿಶ್ರೀ ಹೊರಟಿದ್ದರು.


ಮೃತ ಸಿಬೇಗೌಡರು ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ, ಕುಣಿಗಲ್ ಬೈಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಲು ಒನ್ ವೇಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರಿಯ ಮಗಳು ವರ್ಣಶ್ರೀ ಬೆಂಗಳೂರಿನ ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಾರೆ. ದುಂಬಿಶ್ರೀ, ಬೆಂಗಳೂರಿನ ಗ್ಲೋಬಲ್ ಕಾಲೇಜಿನಲ್ಲಿ ಓದುತ್ತಿದ್ದರು. ಮಗನನ್ನು ಕರೆದುಕೊಂಡು ಹೋಗುವ ಮೊದಲು ಹಿರಿಯ ಮಗಳು ವರ್ಣಶ್ರೀಯನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು.
ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking accident, four members of a single family lost their lives in a car and canter collision on National Highway 75 near the Kunigal bypass in Tumakuru district. The victims were returning after dropping their son at a school hostel.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm