ಬ್ರೇಕಿಂಗ್ ನ್ಯೂಸ್
30-06-25 11:04 am HK News Desk ಕರ್ನಾಟಕ
ತುಮಕೂರು, ಜೂ 30 : ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ.
ಮೃತರೆಲ್ಲರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನು ಹಾಸ್ಟೆಲ್ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತ ಸೀಬೆಗೌಡ ಅವರಿಗೆ ಮೂವರು ಮಕ್ಕಳು. ವರ್ಣಶ್ರೀ, ದುಂಬಿಶ್ರೀ, ಭಾನುಕಿರಣ್ ಗೌಡ.
ಮೃತ ಸಿಬೇಗೌಡ ಅವರ ಮಗ ಭಾನುಕಿರಣ್ ಗೌಡ ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ನಲ್ಲಿ 8ನೇ ತರಗತಿ ಓದುತ್ತಿದ್ದ. ಭಾನುವಾರ ರಜೆ ಹಿನ್ನೆಲೆ ಮನೆಗೆ ಮಗ ಬಂದಿದ್ದ. ನಿನ್ನೆ ಊಟ ಮುಗಿಸಿ ಮಗನನ್ನು ಶಾಲೆಯ ಹಾಸ್ಟೆಲ್ಗೆ ಬಿಟ್ಟು ಬರಲು ಮಗ ಭಾನುಕಿರಣ್ನೊಂದಿಗೆ ಸಿಬೇಗೌಡ, ಅವರ ಪತ್ನಿ ಶೋಭಾ, 2ನೇ ಮಗಳು ದುಂಬಿಶ್ರೀ ಹೊರಟಿದ್ದರು.


ಮೃತ ಸಿಬೇಗೌಡರು ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ, ಕುಣಿಗಲ್ ಬೈಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಲು ಒನ್ ವೇಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರಿಯ ಮಗಳು ವರ್ಣಶ್ರೀ ಬೆಂಗಳೂರಿನ ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಾರೆ. ದುಂಬಿಶ್ರೀ, ಬೆಂಗಳೂರಿನ ಗ್ಲೋಬಲ್ ಕಾಲೇಜಿನಲ್ಲಿ ಓದುತ್ತಿದ್ದರು. ಮಗನನ್ನು ಕರೆದುಕೊಂಡು ಹೋಗುವ ಮೊದಲು ಹಿರಿಯ ಮಗಳು ವರ್ಣಶ್ರೀಯನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು.
ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking accident, four members of a single family lost their lives in a car and canter collision on National Highway 75 near the Kunigal bypass in Tumakuru district. The victims were returning after dropping their son at a school hostel.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm