ಬ್ರೇಕಿಂಗ್ ನ್ಯೂಸ್
30-06-25 02:55 pm HK News Desk ಕರ್ನಾಟಕ
ಮೈಸೂರು, ಜೂ 30 : ನಾನು ಡಿ ಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆಶಿ ಕೈಹಿಡಿದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ಕೆಲವು ದಿನಗಳಿಂದ ಪವರ್ ಸೆಂಟರ್ ಬದಲಾವಣೆ, ಕ್ರಾಂತಿ, 3 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಹೀಗೆ ವಿವಿಧ ವಿಚಾರಗಳು ಚರ್ಚೆಯಾಗುತ್ತಿದ್ದು, ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರ ಕೊಟ್ಟು, ಟೀಕಿಸುವವರು ಬಾಯಿ ಮುಚ್ಚಿಸಲು ಯತ್ನಿಸಿದರು.
ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ ಕೆ ಶಿವಕುಮಾರ್ ಕೈ ಹಿಡಿದು ಮೇಲೆತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಗಳ ಕ್ಯಾಮರಾಗಳತ್ತವೂ ತೋರಿಸಿದರು. ಇನ್ನು ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ ಎಂದು ಪ್ರಶ್ನಿಸಿದರು. ಪಾರ್ಲಿಮೆಂಟ್ನಲ್ಲೂ ಸೋತ, ವಿಧಾನ ಸಭೆಯಲ್ಲೂ ಸೋತ, ಅವರೇನು ಭವಿಷ್ಯ ಹೇಳೋದು ಎಂದು ತಿರುಗೇಟು ಕೊಟ್ಟರು.
ದಸರಾ ಉದ್ಘಾಟನೆ ಮಾಡೋದು ನಾನೇ;
ದಸರಾ ಉದ್ಘಾಟನೆ ನೀವು ಮಾಡಲ್ಲ ಎಂದು ಬಿಜೆಪಿ ಹೇಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಬರೀ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು. ನಾನೂ ಇವನೂ ಚೆನ್ನಾಗೆ ಇದೀವಿ. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ, ಅದೇ ಸತ್ಯ ಎಂದರು.
ಸುರ್ಜೇವಾಲಾ ಭೇಟಿ ವಿಚಾರವಾಗಿ ಮಾತನಾಡಿ, ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆಯ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.
Karnataka Chief Minister Siddaramaiah firmly dismissed ongoing speculation about a rift within the state government and rumors of leadership change, stating that both he and Deputy CM D.K. Shivakumar are working in perfect coordination and the Congress government will complete its full five-year term “as solid as a rock.”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm