ಬ್ರೇಕಿಂಗ್ ನ್ಯೂಸ್
30-06-25 10:30 pm HK News Desk ಕರ್ನಾಟಕ
ಬೆಳಗಾವಿ, ಜೂನ್ 30 : ಶ್ರೀರಾಮಸೇನೆ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೈದ ಪ್ರಕರಣ ಸಂಬಂಧಿಸಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಸುದ್ದಿಗೋಷ್ಟಿ ಕರೆದು ಸ್ಪಷ್ಟನೆ ನೀಡಿದ್ದಾರೆ.
ಇಂಗಳಿ ಗ್ರಾಮದಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಸಂಪರ್ಕ ಮಾಡಿದ್ದೇವೆ. ಅವರು ಸಿಗದೇ ಇರೋ ಹಿನ್ನೆಲೆಯಲ್ಲಿ ನಾವೇ ಸ್ವಯಂಪ್ರೇರಿತ ದೂರು ದಾಖಲು ಮಾಡಿದ್ದೇವೆ. ಜೂನ್ 26ರಂದು ಒಂದು ವಾಹನವನ್ನು ತಡೆದು ವಾಹನ ಮಾಲೀಕರು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಬರ್ತಾರೆ. ವಾಹನದಲ್ಲಿದ್ದವರು ನಾವು ಸಾಕಾಣಿಕೆ ಮಾಡಲು ಹಸುಗಳನ್ನು ಖರೀದಿ ಮಾಡಿದ್ವಿ ಎನ್ನುತ್ತಾರೆ.
ಎರಡು ಪಾರ್ಟಿಯವರು ಬರೆದು ಕೊಟ್ಟ ಪ್ರತಿಗಳು ನಮ್ಮ ಬಳಿ ಇವೆ. ಆನಂತರ ಹಸುಗಳನ್ನ ಗೋ ಶಾಲೆಗೆ ಕಳಸಿದ್ವಿ. ಮೂರು ದಿನಗಳ ಬಳಿಕ ಗೋವುಗಳನ್ನು ಬಿಡಿಸಿಕೊಂಡು ಹೋಗ್ತಾರೆ. ಬಳಿಕ ಶ್ರೀರಾಮಸೇನೆ ಸೇನೆ ಕಾರ್ಯಕರ್ತರು ಫಾಲೋ ಮಾಡಿದ್ದಾರೆ. ವಾಹನ ಮಾಲೀಕ ಬಾಬಾಸಾಬ್ ಮುಲ್ತಾನಿ ಹಸುಗಳನ್ನು ತನ್ನ ಮನೆಗೆ ಒಯ್ಯುತ್ತಾರೆ. ಮಹಿಳೆಯರು ಮನೆಯಲ್ಲಿದ್ದ ಸಂದರ್ಭದಲ್ಲಿ ಕಾರ್ಯಕರ್ತರು ಮನೆಗೆ ನುಗ್ತಾರೆ. ಬಳಿಕ ಗ್ರಾಮಸ್ಥರು ಸೇರಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡ್ತಾರೆ.
ಬಳಿಕ ಪೊಲೀಸರು ತೆರಳಿ ಕಾರ್ಯಕರ್ತರನ್ನು ಕರೆದುಕೊಂಡು ಬಂದಿದ್ದಾರೆ. ಹಲ್ಲೆಯಾದ ಬಗ್ಗೆ ಪೊಲೀಸರ ಮುಂದೆ ಶ್ರೀರಾಮಸೇನೆ ಕಾರ್ಯಕರ್ತರು ಹೇಳಿಲ್ಲ, ವಿಡಿಯೋ ಆಧರಿಸಿ ನಾವೇ ಸ್ವಯಂಪ್ರೇರಿತ ದೂರು ದಾಖಲು ಮಾಡಿದ್ದೇವೆ. ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ಹಿಂದು ಹಾಗೂ ಮೂರು ಜನ ಮುಸ್ಲಿಮರು ಇದ್ದಾರೆ.
ಗೋ ಸಾಗಾಣಿಕೆ ತಡೆದವರು ಹಣ ವಸೂಲಿ ಮಾಡಿದ್ದಾರೆಂಬ ಆರೋಪ ಇದೆ. ಅದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಕ್ರಮ ಗೋವು ಸಾಗಾಣಿಕೆ ಆಗಿದ್ದರೆ ಪೊಲೀಸರಿಗೆ ಮಾಹಿತಿ ಕೊಡಬೇಕು. ತಾವೇ ಮನೆಗೆ ನುಗ್ಗುವುದು ಅಪರಾಧ. ಇದೇ ರೀತಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ಕೊಡದೆ ಹಲ್ಲೆ ಮಾಡಿದ್ದು ಸಹ ಅಪರಾಧ. ಘಟನೆಯಲ್ಲಿ ಕಪೋಲ ಕಲ್ಪಿತ ವರದಿಗಳು ಬಂದಿದೆ.
ಅಕ್ರಮ ಮನೆ ಪ್ರವೇಶ ಬಗ್ಗೆ ಐದು ಜನರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಬಂಧಿತ ಶ್ರೀರಾಮಸೇನೆ ಕಾರ್ಯಕರ್ತ ಪೈಕಿ ಓರ್ವ ರೌಡಿಶೀಟರ್ ಇದ್ದಾನೆ. ಗಡಿಪಾರು ಆಗಿರೋ ರೌಡಿ ಶೀಟರ್ ಇಲ್ಲಿಗೆ ಬಂದಿದ್ದಾನೆ ಎಂದು ಹೇಳಿದ ಎಸ್ಪಿ ನಮ್ಮ ದೂರು ಸ್ವೀಕಾರ ಮಾಡಿಲ್ಲ ಎನ್ನುವ ಆರೋಪದ ಬಗ್ಗೆ, ದೂರು ಪ್ರತಿ ಇದ್ರೆ ತೋರಿಸಲಿ ಎಂದು ಹೇಳಿದ್ದಾರೆ.
Belagavi Superintendent of Police Dr. Bheemashankar S. Guled has clarified the recent incident involving an alleged attack on Sri Rama Sene activists. Addressing the media, he provided details regarding the unfortunate incident that took place in Ingali village.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm