ಬ್ರೇಕಿಂಗ್ ನ್ಯೂಸ್
30-06-25 10:30 pm HK News Desk ಕರ್ನಾಟಕ
ಬೆಳಗಾವಿ, ಜೂನ್ 30 : ಶ್ರೀರಾಮಸೇನೆ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೈದ ಪ್ರಕರಣ ಸಂಬಂಧಿಸಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಸುದ್ದಿಗೋಷ್ಟಿ ಕರೆದು ಸ್ಪಷ್ಟನೆ ನೀಡಿದ್ದಾರೆ.
ಇಂಗಳಿ ಗ್ರಾಮದಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಸಂಪರ್ಕ ಮಾಡಿದ್ದೇವೆ. ಅವರು ಸಿಗದೇ ಇರೋ ಹಿನ್ನೆಲೆಯಲ್ಲಿ ನಾವೇ ಸ್ವಯಂಪ್ರೇರಿತ ದೂರು ದಾಖಲು ಮಾಡಿದ್ದೇವೆ. ಜೂನ್ 26ರಂದು ಒಂದು ವಾಹನವನ್ನು ತಡೆದು ವಾಹನ ಮಾಲೀಕರು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಬರ್ತಾರೆ. ವಾಹನದಲ್ಲಿದ್ದವರು ನಾವು ಸಾಕಾಣಿಕೆ ಮಾಡಲು ಹಸುಗಳನ್ನು ಖರೀದಿ ಮಾಡಿದ್ವಿ ಎನ್ನುತ್ತಾರೆ.
ಎರಡು ಪಾರ್ಟಿಯವರು ಬರೆದು ಕೊಟ್ಟ ಪ್ರತಿಗಳು ನಮ್ಮ ಬಳಿ ಇವೆ. ಆನಂತರ ಹಸುಗಳನ್ನ ಗೋ ಶಾಲೆಗೆ ಕಳಸಿದ್ವಿ. ಮೂರು ದಿನಗಳ ಬಳಿಕ ಗೋವುಗಳನ್ನು ಬಿಡಿಸಿಕೊಂಡು ಹೋಗ್ತಾರೆ. ಬಳಿಕ ಶ್ರೀರಾಮಸೇನೆ ಸೇನೆ ಕಾರ್ಯಕರ್ತರು ಫಾಲೋ ಮಾಡಿದ್ದಾರೆ. ವಾಹನ ಮಾಲೀಕ ಬಾಬಾಸಾಬ್ ಮುಲ್ತಾನಿ ಹಸುಗಳನ್ನು ತನ್ನ ಮನೆಗೆ ಒಯ್ಯುತ್ತಾರೆ. ಮಹಿಳೆಯರು ಮನೆಯಲ್ಲಿದ್ದ ಸಂದರ್ಭದಲ್ಲಿ ಕಾರ್ಯಕರ್ತರು ಮನೆಗೆ ನುಗ್ತಾರೆ. ಬಳಿಕ ಗ್ರಾಮಸ್ಥರು ಸೇರಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡ್ತಾರೆ.
ಬಳಿಕ ಪೊಲೀಸರು ತೆರಳಿ ಕಾರ್ಯಕರ್ತರನ್ನು ಕರೆದುಕೊಂಡು ಬಂದಿದ್ದಾರೆ. ಹಲ್ಲೆಯಾದ ಬಗ್ಗೆ ಪೊಲೀಸರ ಮುಂದೆ ಶ್ರೀರಾಮಸೇನೆ ಕಾರ್ಯಕರ್ತರು ಹೇಳಿಲ್ಲ, ವಿಡಿಯೋ ಆಧರಿಸಿ ನಾವೇ ಸ್ವಯಂಪ್ರೇರಿತ ದೂರು ದಾಖಲು ಮಾಡಿದ್ದೇವೆ. ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ಹಿಂದು ಹಾಗೂ ಮೂರು ಜನ ಮುಸ್ಲಿಮರು ಇದ್ದಾರೆ.
ಗೋ ಸಾಗಾಣಿಕೆ ತಡೆದವರು ಹಣ ವಸೂಲಿ ಮಾಡಿದ್ದಾರೆಂಬ ಆರೋಪ ಇದೆ. ಅದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಕ್ರಮ ಗೋವು ಸಾಗಾಣಿಕೆ ಆಗಿದ್ದರೆ ಪೊಲೀಸರಿಗೆ ಮಾಹಿತಿ ಕೊಡಬೇಕು. ತಾವೇ ಮನೆಗೆ ನುಗ್ಗುವುದು ಅಪರಾಧ. ಇದೇ ರೀತಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ಕೊಡದೆ ಹಲ್ಲೆ ಮಾಡಿದ್ದು ಸಹ ಅಪರಾಧ. ಘಟನೆಯಲ್ಲಿ ಕಪೋಲ ಕಲ್ಪಿತ ವರದಿಗಳು ಬಂದಿದೆ.
ಅಕ್ರಮ ಮನೆ ಪ್ರವೇಶ ಬಗ್ಗೆ ಐದು ಜನರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಬಂಧಿತ ಶ್ರೀರಾಮಸೇನೆ ಕಾರ್ಯಕರ್ತ ಪೈಕಿ ಓರ್ವ ರೌಡಿಶೀಟರ್ ಇದ್ದಾನೆ. ಗಡಿಪಾರು ಆಗಿರೋ ರೌಡಿ ಶೀಟರ್ ಇಲ್ಲಿಗೆ ಬಂದಿದ್ದಾನೆ ಎಂದು ಹೇಳಿದ ಎಸ್ಪಿ ನಮ್ಮ ದೂರು ಸ್ವೀಕಾರ ಮಾಡಿಲ್ಲ ಎನ್ನುವ ಆರೋಪದ ಬಗ್ಗೆ, ದೂರು ಪ್ರತಿ ಇದ್ರೆ ತೋರಿಸಲಿ ಎಂದು ಹೇಳಿದ್ದಾರೆ.
Belagavi Superintendent of Police Dr. Bheemashankar S. Guled has clarified the recent incident involving an alleged attack on Sri Rama Sene activists. Addressing the media, he provided details regarding the unfortunate incident that took place in Ingali village.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm