ಬ್ರೇಕಿಂಗ್ ನ್ಯೂಸ್
01-07-25 04:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1 : ಆರ್ ಸಿಬಿ ತಂಡದ ಐಪಿಎಲ್ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶ ಮಾಡಿದ್ದು ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 64 ಮಂದಿ ಗಾಯಗೊಂಡಿದ್ದರು. ಜನದಟ್ಟಣೆ ನಿಯಂತ್ರಿಸುವಲ್ಲಿ ವೈಫಲ್ಯದಿಂದಾಗಿ ಭಾರಿ ಟೀಕೆ ವ್ಯಕ್ತವಾಗಿತ್ತು. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ವಿಕಾಸ್ ಕುಮಾರ್ ಜೊತೆಗೆ ಹಿಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.
ಅಮಾನತು ಆದೇಶ ಪ್ರಶ್ನಿಸಿ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ. ಶ್ರೀವಾತ್ಸವ, ಸಂತೋಷ್ ಮೆಹ್ರಾ ನೇತೃತ್ವದ ಪೀಠ, ಜೂನ್ 24ರಂದು ಕಾಯ್ದಿರಿಸಿದ್ದ ಆದೇಶವನ್ನು ಇಂದು ಪ್ರಕಟಿಸಿದ್ದು, ವಿಕಾಸ್ ಕುಮಾರ್ ಅವರ ಅಮಾನತು ರದ್ದುಪಡಿಸಿ ಆದೇಶಿಸಿದೆ.
ವಿಕಾಸ್ ಕುಮಾರ್ ಪರ ವಾದಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಟ್ರಿಬ್ಯೂನಲ್ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ್ದು, ಸೇವಾ ನಿಯಮಗಳ ಪ್ರಕಾರ ಅವರು ಪ್ರಯೋಜನಗಳಿಗೆ ಅರ್ಹರಾಗಿದ್ದಾರೆ ಎಂದು ದೃಢಪಡಿಸಿದರು. ದಯಾನಂದ್ ಮತ್ತು ತೆಕ್ಕಣ್ಣನವರ್ ಗೆ ಸಂಬಂಧಿಸಿದ ಪ್ರಕರಣಗಳನ್ನು ಸಿಎಟಿ ಪರಿಶೀಲಿಸುತ್ತಿದ್ದು, ಅವರ ಅಮಾನತು ರದ್ದುಗೊಳಿಸುವ ಸಾಧ್ಯತೆಯಿದೆ.
ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಹಿಂದಿನ ಪೊಲೀಸ್ ಕಮಿಷನರ್ ದಯಾನಂದ್, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣವರ್, ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಎ. ಕೆ. ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು.
In a significant blow to the Karnataka government, the Central Administrative Tribunal (CAT) has revoked the suspension of Bengaluru East Zone Additional Commissioner of Police Vikas Kumar in connection with the tragic stampede incident near Chinnaswamy Stadium during the Royal Challengers Bangalore (RCB) IPL victory celebrations.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm