ಬ್ರೇಕಿಂಗ್ ನ್ಯೂಸ್
01-07-25 09:57 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 1 : ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡೇ ದಿನದಲ್ಲಿ ವಿದ್ಯಾರ್ಥಿ ಸೇರಿ ನಾಲ್ವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
21 ವರ್ಷದ ಯುವಕ, 23 ವರ್ಷದ ವಿವಾಹಿತೆ ಮತ್ತು ಓರ್ವ ವೈದ್ಯ, ಹಾಗೂ 52 ವರ್ಷದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭಾನುವಾರ ಡಿವಿಎಸ್ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶ್ರೀನಿಧಿ (21) ಹೃದಯಾಘಾತದಿಂದ ಸಾವನ್ನಪ್ಪಿದ್ದ. ಬಸವಗಂಗೂರಿನ ನಿವಾಸಿ ಶ್ರೀನಿಧಿಗೆ ಮುಂಜಾನೆಯೇ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತ್ತು. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ. ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಸೋಮವಾರ ಜಿಲ್ಲೆಯಲ್ಲಿ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಂದೀಪ್ (40) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದ ಬಾಣಂತಿ ಹರ್ಷಿತಾ (23) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹರ್ಷಿತಾ ಹಾಸನ ಜಿಲ್ಲೆಯ ಯುವಕನನ್ನು ಮದುವೆಯಾಗಿದ್ದರು. ಎ.5 ರಂದು ಎರಡನೇ ಹೆರಿಗೆಗೆ ಆಯನೂರು ಬಳಿಯ ದ್ಯಾವಿನಕೆರೆಯಲ್ಲಿರುವ ತವರು ಮನೆಗೆ ಬಂದಿದ್ದರು. ಮೇ 24 ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿ 34 ದಿನಗಳ ಅಂತರದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಶಿವಮೊಗ್ಗದ ಮೆಗ್ಗಾನ್ಗೆ ದಾಖಲಿಸಲು ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಚಿಕ್ಕಮ್ಮನ ಮಗನ ಅಂತ್ಯಕ್ರಿಯೆಗೆ ತೆರಳಿದ್ದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಮಹಿಳೆ ಸಾವಿಗೀಡಾಗಿದ್ದಾರೆ. ಮೃತರನ್ನು ಚೈತ್ರಾ (52) ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆಯ ರೀತಿಯಲ್ಲೇ ಶಿವಮೊಗ್ಗದಲ್ಲೂ ಸರಣಿ ಹೃದಯಾಘಾತಕ್ಕೆ ಜನ ಬಲಿಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
Rising incidents of heart attacks among young people have caused concern in Shivamogga district, where four individuals, including a student, a doctor, and a young woman, have died of cardiac arrest within just two days.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm