ಬ್ರೇಕಿಂಗ್ ನ್ಯೂಸ್
02-07-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸಿದ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಜುಲೈ 1 ರಂದು ನ್ಯಾಯಮಂಡಳಿ ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸಿಎಟಿ ಆದೇಶದ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದು, ಇಂದೇ ಅರ್ಜಿ ವಿಚಾರಣೆ ನಡೆಸಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದರು. ಆದರೆ ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿತು.
ಇದಕ್ಕುತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಅಮಾನತು ಆದೇಶ ರದ್ದುಪಡಿಸಿದ ಕಾರಣ ಅಧಿಕಾರ ವಹಿಸಿಕೊಳ್ಳಲು ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಗುರುವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
The Karnataka State Government has approached the High Court challenging the Central Administrative Tribunal (CAT) order that revoked the suspension of Additional Commissioner of Police Vikas Kumar in connection with the Chinnaswamy Stadium stampede incident.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm