ಬ್ರೇಕಿಂಗ್ ನ್ಯೂಸ್
03-07-25 10:54 am HK News Desk ಕರ್ನಾಟಕ
ಸುಬ್ರಹ್ಮಣ್ಯ, ಜು 03 : ಕಡಬ, ಸುಳ್ಯ ತಾಲೂಕು ಹಾಗೂ ಕುಕ್ಕೆಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರವಾಗಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಮಳೆ ಹಿನ್ನೆಲೆಯಲ್ಲಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
ಶಿರಾಡಿ ಘಟ್ಟ ಪ್ರದೇಶ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ರಾತ್ರಿ ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿ, ಲಗೇಜ್ ಕೊಠಡಿ ಬಳಿವರೆಗೂ ನದಿ ನೀರು ಆವರಿಸಿದೆ.
ನದಿ ನೀರಿನ ಬಳಿಗೆ ಭಕ್ತರು ತೆರಳದಂತೆ ಸೂಚಿಸಲಾಗಿದ್ದು, ನದಿ ದಡದಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ನದಿ ನೀರಿಗೆ ಇಳಿದು ತೀರ್ಥ ಸ್ನಾನ ನೆರವೇರಿಸುವುದಕ್ಕೂ ನಿರ್ಬಂಧಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಬಿಳಿನೆಲೆ, ಬಳ್ಪ, ಐನೆಕಿದು, ಪಂಜ, ಕಡಬ, ಕೋಡಿಂಬಾಳ, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಳ್ಯ ಪ್ರದೇಶದಲ್ಲೂ ಬುಧವಾರ ರಾತ್ರಿಯಿಂದ ಆರಂಭವಾದ ಧಾರಾಕಾರ ಮಳೆ ಆದೇ ತರಹ ನಿರಂತರವಾಗಿ ಸುರಿಯುತ್ತಲೇ ಇದೆ. ಸುಳ್ಯ ಮತ್ತು ಕಡಬ ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಸೇವೆಗಳನ್ನು ಆರಂಭಿಸಲಾಗಿದೆ.
ಮತ್ತೊಂದು ಕಡೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಾಂತ ಭಾರಿ ಮಳೆಯಾಗುತ್ತಿರುವುದರಿಂದ ಮೂರು ತಾಲೂಕು ಆಡಳಿತಗಳು ಅಂಗನವಾಡಿ ಸೇರಿದಂತೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಈ ಕುರಿತು ಮೂರು ತಾಲೂಕಿನ ತಹಶೀಲ್ದಾರ್ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Incessant heavy rainfall continues to lash Kadaba and Sullia taluks, as well as the surrounding areas of Kukke Subrahmanya. As a result, the Kumaradhara river has overflowed, submerging the sacred bathing ghat near the famous temple.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm