ಬ್ರೇಕಿಂಗ್ ನ್ಯೂಸ್
04-07-25 05:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಹಣಕ್ಕಾಗಿ ಸರ್ಕಾರಿ ನೌಕರರನ್ನು ಪೀಡಿಸುತ್ತಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಭ್ರಷ್ಟಾಚಾರ ಪ್ರಕರಣ ಸಾಬೀತಾಗಿದ್ದು, ಐಪಿಎಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ರಾಜ್ಯದ ಲೋಕಾಯುಕ್ತ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಲೋಕಾಯುಕ್ತ ಬೆಂಗಳೂರು ನಗರ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಹಾಗೂ ಕಾನ್ಸ್ಟೇಬಲ್ ನಿಂಗಪ್ಪ ಲಂಚದ ಹಣಕ್ಕಾಗಿ ಭಾರೀ ಅಕ್ರಮ ಎಸಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರಿಬ್ಬರೂ ಕರ್ತವ್ಯ ಸಮಯದಲ್ಲಿ ಅಬಕಾರಿ, ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ ಬರೆದಿದೆ.
ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ಎಂಬವರು ಲೋಕಾಯುಕ್ತ ದಾಳಿ ಮಾಡಿಸುತ್ತೇವೆ ಎಂದು ಸರ್ಕಾರಿ ಅಧಿಕಾರಿಗಳನ್ನು ಬೆದರಿಸುತ್ತಿದ್ದರು. ‘‘ಕೆಜಿ’’ ಎಂಬ ಕೋಡ್ ವರ್ಡ್ ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದುದು ತನಿಖೆಯಿಂದ ದೃಢಪಟ್ಟಿದೆ. ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ನಿಂಗಪ್ಪ ಕ್ರಿಪ್ಟೋ ಕರೆನ್ಸಿಯಲ್ಲಿ 4.92 ಕೋಟಿ ರೂ. ಹೂಡಿಕೆ ಮಾಡಿದ್ದರು ಎಂಬುದನ್ನೂ ಲೋಕಾಯುಕ್ತ ತಿಳಿಸಿದೆ.
ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಿಂಗಪ್ಪ ಅವರನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ಲೋಕಾಯುಕ್ತ ಎಸ್ಪಿಯಾಗಿದ್ದ ಶ್ರೀನಾಥ್ ಜೋಷಿ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ವಿಚಾರ ತಿಳಿದುಬಂದಿತ್ತು. ಶ್ರೀನಾಥ್ ಜೋಷಿ ಜತೆ ಸಂಪರ್ಕದಲ್ಲಿದ್ದುಕೊಂಡೇ ನಿಂಗಪ್ಪ ಸರ್ಕಾರಿ ಅಧಿಕಾರಿಗಳನ್ನು ಹೆದರಿಸಿ ಅವರಿಂದ ಹಣ ಪಡೆದಿದ್ದರು.
ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ವಾಟ್ಸ್ಆ್ಯಪ್ ಮೂಲಕ ಕರೆ ಮಾಡುತ್ತಿದ್ದು, ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು. ಆ ಕುರಿತ ಸಾಕ್ಷ್ಯಗಳನ್ನೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಲೋಕಾಯುಕ್ತ ಹೇಳಿಕೆಯಲ್ಲಿ ತಿಳಿಸಿದೆ.
In a shocking development, the Karnataka Lokayukta has confirmed serious corruption charges against IPS officer Srinath Joshi, who previously served as the Lokayukta SP for Bengaluru Urban. The official statement released today recommends disciplinary action against Joshi for abusing his position to extort money from government employees.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm