ಬ್ರೇಕಿಂಗ್ ನ್ಯೂಸ್
04-07-25 05:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಹಣಕ್ಕಾಗಿ ಸರ್ಕಾರಿ ನೌಕರರನ್ನು ಪೀಡಿಸುತ್ತಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಭ್ರಷ್ಟಾಚಾರ ಪ್ರಕರಣ ಸಾಬೀತಾಗಿದ್ದು, ಐಪಿಎಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ರಾಜ್ಯದ ಲೋಕಾಯುಕ್ತ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಲೋಕಾಯುಕ್ತ ಬೆಂಗಳೂರು ನಗರ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಹಾಗೂ ಕಾನ್ಸ್ಟೇಬಲ್ ನಿಂಗಪ್ಪ ಲಂಚದ ಹಣಕ್ಕಾಗಿ ಭಾರೀ ಅಕ್ರಮ ಎಸಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರಿಬ್ಬರೂ ಕರ್ತವ್ಯ ಸಮಯದಲ್ಲಿ ಅಬಕಾರಿ, ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ ಬರೆದಿದೆ.
ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ಎಂಬವರು ಲೋಕಾಯುಕ್ತ ದಾಳಿ ಮಾಡಿಸುತ್ತೇವೆ ಎಂದು ಸರ್ಕಾರಿ ಅಧಿಕಾರಿಗಳನ್ನು ಬೆದರಿಸುತ್ತಿದ್ದರು. ‘‘ಕೆಜಿ’’ ಎಂಬ ಕೋಡ್ ವರ್ಡ್ ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದುದು ತನಿಖೆಯಿಂದ ದೃಢಪಟ್ಟಿದೆ. ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ನಿಂಗಪ್ಪ ಕ್ರಿಪ್ಟೋ ಕರೆನ್ಸಿಯಲ್ಲಿ 4.92 ಕೋಟಿ ರೂ. ಹೂಡಿಕೆ ಮಾಡಿದ್ದರು ಎಂಬುದನ್ನೂ ಲೋಕಾಯುಕ್ತ ತಿಳಿಸಿದೆ.
ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಿಂಗಪ್ಪ ಅವರನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ಲೋಕಾಯುಕ್ತ ಎಸ್ಪಿಯಾಗಿದ್ದ ಶ್ರೀನಾಥ್ ಜೋಷಿ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ವಿಚಾರ ತಿಳಿದುಬಂದಿತ್ತು. ಶ್ರೀನಾಥ್ ಜೋಷಿ ಜತೆ ಸಂಪರ್ಕದಲ್ಲಿದ್ದುಕೊಂಡೇ ನಿಂಗಪ್ಪ ಸರ್ಕಾರಿ ಅಧಿಕಾರಿಗಳನ್ನು ಹೆದರಿಸಿ ಅವರಿಂದ ಹಣ ಪಡೆದಿದ್ದರು.
ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ವಾಟ್ಸ್ಆ್ಯಪ್ ಮೂಲಕ ಕರೆ ಮಾಡುತ್ತಿದ್ದು, ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು. ಆ ಕುರಿತ ಸಾಕ್ಷ್ಯಗಳನ್ನೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಲೋಕಾಯುಕ್ತ ಹೇಳಿಕೆಯಲ್ಲಿ ತಿಳಿಸಿದೆ.
In a shocking development, the Karnataka Lokayukta has confirmed serious corruption charges against IPS officer Srinath Joshi, who previously served as the Lokayukta SP for Bengaluru Urban. The official statement released today recommends disciplinary action against Joshi for abusing his position to extort money from government employees.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm