ಬ್ರೇಕಿಂಗ್ ನ್ಯೂಸ್
04-07-25 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಕನ್ನಡದ ನಟಿ ಮತ್ತು ರಾಜಕಾರಣಿಯೂ ಆಗಿರುವ ಭಾವನಾ ರಾಮಣ್ಣ ಮದುವೆಯಾಗದೆ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಲು ಮುಂದಾಗಿದ್ದಾರೆ. ಐವಿಎಫ್ ಮೂಲಕ ಭಾವನಾ ಗರ್ಭ ಧರಿಸಿದ್ದು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾ ಖಾತೆಯಲ್ಲಿ ಭಾವನಾ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಎದುರಾದ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ ಅನ್ನುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.

"ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.
ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿ ಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳೆಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ" ಎಂದು ಬರೆದಿದ್ದಾರೆ.
Bhavana, who shared her joy about becoming a mother, said that she is legally becoming a mother through IVF without getting married. Bhavana, who is about to give birth to two children as a single parent, is expecting twins through IVF.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm