ಬ್ರೇಕಿಂಗ್ ನ್ಯೂಸ್
04-07-25 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಕನ್ನಡದ ನಟಿ ಮತ್ತು ರಾಜಕಾರಣಿಯೂ ಆಗಿರುವ ಭಾವನಾ ರಾಮಣ್ಣ ಮದುವೆಯಾಗದೆ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಲು ಮುಂದಾಗಿದ್ದಾರೆ. ಐವಿಎಫ್ ಮೂಲಕ ಭಾವನಾ ಗರ್ಭ ಧರಿಸಿದ್ದು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾ ಖಾತೆಯಲ್ಲಿ ಭಾವನಾ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಎದುರಾದ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ ಅನ್ನುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.

"ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.
ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿ ಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳೆಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ" ಎಂದು ಬರೆದಿದ್ದಾರೆ.
Bhavana, who shared her joy about becoming a mother, said that she is legally becoming a mother through IVF without getting married. Bhavana, who is about to give birth to two children as a single parent, is expecting twins through IVF.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm