ಬ್ರೇಕಿಂಗ್ ನ್ಯೂಸ್
04-07-25 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಕನ್ನಡದ ನಟಿ ಮತ್ತು ರಾಜಕಾರಣಿಯೂ ಆಗಿರುವ ಭಾವನಾ ರಾಮಣ್ಣ ಮದುವೆಯಾಗದೆ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಲು ಮುಂದಾಗಿದ್ದಾರೆ. ಐವಿಎಫ್ ಮೂಲಕ ಭಾವನಾ ಗರ್ಭ ಧರಿಸಿದ್ದು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾ ಖಾತೆಯಲ್ಲಿ ಭಾವನಾ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಎದುರಾದ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ ಅನ್ನುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.

"ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.
ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿ ಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳೆಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ" ಎಂದು ಬರೆದಿದ್ದಾರೆ.
Bhavana, who shared her joy about becoming a mother, said that she is legally becoming a mother through IVF without getting married. Bhavana, who is about to give birth to two children as a single parent, is expecting twins through IVF.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm