ಬ್ರೇಕಿಂಗ್ ನ್ಯೂಸ್
04-07-25 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಕನ್ನಡದ ನಟಿ ಮತ್ತು ರಾಜಕಾರಣಿಯೂ ಆಗಿರುವ ಭಾವನಾ ರಾಮಣ್ಣ ಮದುವೆಯಾಗದೆ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಲು ಮುಂದಾಗಿದ್ದಾರೆ. ಐವಿಎಫ್ ಮೂಲಕ ಭಾವನಾ ಗರ್ಭ ಧರಿಸಿದ್ದು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾ ಖಾತೆಯಲ್ಲಿ ಭಾವನಾ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಎದುರಾದ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ ಅನ್ನುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.
"ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.
ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿ ಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳೆಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ" ಎಂದು ಬರೆದಿದ್ದಾರೆ.
Bhavana, who shared her joy about becoming a mother, said that she is legally becoming a mother through IVF without getting married. Bhavana, who is about to give birth to two children as a single parent, is expecting twins through IVF.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 06:39 pm
Mangalore Correspondent
Mangalore, Heart Attack: ಪ್ರತ್ಯೇಕ ಪ್ರಕರಣ ; ಮೂ...
20-09-25 02:31 pm
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm