ಬ್ರೇಕಿಂಗ್ ನ್ಯೂಸ್
04-07-25 10:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ರಾಜ್ಯದಲ್ಲಿ ಹಾಸನ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹೃದಯಘಾತದಿಂದ ಸರಣಿ ಸಾವು ಸಂಭವಿಸುತ್ತಿರುವುದು ಸರ್ಕಾರದ ನಿದ್ದೆಗೆಡಿಸಿದೆ. ಸರಣಿ ಹೃದಯಾಘಾತಕ್ಕೇನು ಕಾರಣ ಎಂಬ ಬಗ್ಗೆ ಅಧ್ಯಯನಕ್ಕೆ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿಗಳನ್ನು ರಚಿಸಿದ್ದು ತಜ್ಞರು ಅಧ್ಯಯನ ವರದಿ ತಯಾರಿಸುತ್ತಿದ್ದಾರೆ. ಶುಕ್ರವಾರ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳಿದ್ದು ಕೊರೋನಾ ರೋಗದ ಬಳಿಕ ಹೃದಯಾಘಾತ ಹೆಚ್ಚಳವಾಗಿರುವುದನ್ನು ಎತ್ತಿ ತೋರಿಸಿದ್ದಾರೆ. ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರಿಗೆ ಹೃದಯ ಸಮಸ್ಯೆ ಹೆಚ್ಚು ಕಾಡುತ್ತಿದೆ. ಆದರೆ ಹೃದಯಘಾತಕ್ಕೆ ಕರೋನಾ ಲಸಿಕೆ ಕಾರಣವಲ್ಲ. ಕೊರೊನಾ ವೈರಸ್ ಸಮಸ್ಯೆ ಉಂಟು ಮಾಡುತ್ತಿದೆ ಎಂಬ ಮಾಹಿತಿಗಳು ವರದಿಯಲ್ಲಿವೆಯಂತೆ.
ವರದಿಯಲ್ಲಿ ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಕೊರೋನಾ ಬಂದ ಮೂರು ವರ್ಷದ ಬಳಿಕ ಹೃದಯ ಸಮಸ್ಯೆ ಕಂಡುಬರುತ್ತಿರುವುದು ಯಾಕೆ ಎನ್ನುವ ಬಗ್ಗೆಯೂ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ. ಅಲ್ಲದೆ, ಕರೋನಾ ಸೋಂಕಿಗೆ ಒಳಗಾದವರಿಗೆ ನಿದ್ರಾಹೀನತೆ, ಸುಸ್ತು, ಉಸಿರಾಟದ ಸಮಸ್ಯೆ, ಅತಿಯಾದ ಬೊಜ್ಜು ಕಂಡುಬರುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಯಿತು. ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು ಅಂತಿಮ ವರದಿ ತಯಾರಿಸಿ ಮುಖ್ಯಮಂತ್ರಿಗೆ ನೀಡಲಿದ್ದಾರೆ.
The Karnataka government has launched an in-depth technical study into the alarming rise in heart attack cases reported across several districts, including Bengaluru and Hassan, following a series of sudden deaths that have raised public concern.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm