ಬ್ರೇಕಿಂಗ್ ನ್ಯೂಸ್
23-12-20 12:47 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ. 23 :ರಾಜ್ಯದಲ್ಲಿ ಕೊರೊನಾ ಆತಂಕ ಕಳೆದು, ಶಾಲೆಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವಾಗಲೇ ರೂಪಾಂತರಿ ಕೊರೊನಾ ವೈರಸ್ ಕಾಟ ಮತ್ತೆ ಆತಂಕ ಸೃಷ್ಟಿಸಿದೆ. ಆದರೆ ಶಾಲೆ ಆರಂಭಿಸುವ ಪ್ರಕ್ರಿಯೆ ನಿಗದಿಯಂತೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇದೀಗ 2021ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ತರಗತಿಗಳನ್ನು ಜ.1 ರಿಂದ ನಡೆಸಲು ತಯಾರಿ ನಡೆಸಲಾಗಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಹಾಗೂ ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ, ಮಾರ್ಚ್ ವೇಳೆಗೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದು ಕಷ್ಟ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಸುದ್ದಿ ವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್. ಸುರೇಶ್ ಕುಮಾರ್, ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮ ಗೊಳಿಸಲಾಗುತ್ತದೆ. ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ. ಅಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಕಲಿಕೆಯನ್ನು ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ವಿಶೇಷವಾಗಿ ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ. ಜೊತೆಗೆ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳೂ ಅಳವಡಿಸಿಕೊಳ್ಳಲಿ ಎಂದಿದ್ದಾರೆ.

ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮ ಕಾರ್ಯಕ್ರಮವನ್ನು ಸರ್ಕಾರಿ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಆದರೆ ವಿದ್ಯಾಗಮದ ಮೂಲಕ ತರಗತಿಗಳು ನಡೆದರೂ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ ತಿಂಗಳಿನಲ್ಲಿ ನಡೆಸುವುದಿಲ್ಲ. ಮಕ್ಕಳಿಗೆ ಸರಿಯಾದ ತರಗತಿಯ ಬಳಿಕವೇ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ. ಆ ಮೂಲಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರ ಬಹುದೊಡ್ಡ ಗೊಂದಲವನ್ನು ಶಿಕ್ಷಣ ಸಚಿವರು ಪರಿಹರಿಸಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm