ಬ್ರೇಕಿಂಗ್ ನ್ಯೂಸ್
06-07-25 04:50 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 6 : ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದಾರ್ಷ್ಟ್ಯತನ ಮೆರೆದ ಘಟನೆ ನಡೆದಿದ್ದು ಹಿಂದುಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ, ಶೇಷ ನಾಗ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.



ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅರೋಪಿಗಳನ್ನು ಸದ್ದಾಂ ಹಾಗ ರೆಹಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹಾಗೂ ಎಂಎಲ್ಸಿ ಧನಂಜಯ್ ಸರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಇದೇ ರಾಗಿಗುಡ್ಡದಲ್ಲಿ ಟಿಪ್ಪು ಪ್ರತಿಮೆ ವಿಚಾರದಲ್ಲಿ ಭುಗಿಲೆದ್ದ ಗಲಾಟೆ ಕೋಮು ಗಲಭೆಗೆ ತಿರುಗಿತ್ತು. ತಿಳಿದುಬಂದಿದೆ.ಈ ಬಗ್ಗೆ ಅಧಿಕೃತ ಮಾಹಿತಿ ಪೊಲೀಸರು ನೀಡಿಲ್ಲ. ನಾಲ್ಕು ವರ್ಷಗಳ ಹಿಂದೆ ಇದೇ ರಾಗಿಗುಡ್ಡದಲ್ಲಿ ಟಿಪ್ಪು ಪ್ರತಿಮೆ ವಿಚಾರದಲ್ಲಿ ಭುಗಿಲೆದ್ದ ಗಲಾಟೆ ಕೋಮು ಗಲಭೆಗೆ ತಿರುಗಿತ್ತು.
Tension prevailed in Raghigudda area of Shivamogga district after miscreants desecrated Hindu idols, sparking outrage among Hindu groups. The incident occurred in the Bangarappa Layout, where newly installed idols of Lord Ganesha and Shesha Nag atop a sacred naga platform (nagar katte) were reportedly desecrated and thrown into a nearby drain.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm