ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm