ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am