ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm