ಬ್ರೇಕಿಂಗ್ ನ್ಯೂಸ್
14-07-25 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 14 : ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ, ಅಸ್ವಾಭಾವಿಕ ಸಾವು, ಅತ್ಯಾಚಾರ -ಕೊಲೆ ಪ್ರಕರಣಗಳಿಗೆ ಸಂಬಂಧಿಸಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ,. ಜುಲೈ 12ರಂದು ರಾಷ್ಟ್ರೀಯ ಮಾಧ್ಯಮದಲ್ಲಿ ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಮತ್ತು ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ.
ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20 ವರ್ಷಗಳಲ್ಲಿ ಗಂಭೀರ ಸ್ವರೂಪದ ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು, ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವುದೆಂದು ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದಾಗ ಸಿಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿದ್ದಾರೆ. ಹೀಗಾಗಿ ಕಳೆದ 20 ವರ್ಷಗಳಲ್ಲಿ ನಡೆದಿರುವ ಯುವತಿಯರ ನಾಪತ್ತೆ, ಅಸ್ವಾಭಾವಿಕ ಸಾವು- ಕೊಲೆ ಪ್ರಕರಣಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
Karnataka State Commission for Women has urged Chief Minister Siddaramaiah to constitute a Special Investigation Team (SIT) to probe the mysterious disappearances, unnatural deaths, and suspected murders and sexual assaults of women and students reported over the last two decades in the Dharmasthala region.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm