ಬ್ರೇಕಿಂಗ್ ನ್ಯೂಸ್
15-07-25 12:27 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15 : ನಟಿ ಸರೋಜಾ ದೇವಿ ಕನ್ನಡ ಚಿತ್ರರಂಗದಲ್ಲಿ ಉತ್ತುಂಗದಲ್ಲಿದ್ದಾಗಲೇ ಆಗ ಚಿರ ಯೌವ್ವನಿಗರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಡುವೆ ಪ್ರೀತಿ ಅರಳಿತ್ತು. ಇಬ್ಬರ ನಡುವಿನ ಒಲವು ಮದುವೆ ಹಂತಕ್ಕೂ ಬಂದಿತ್ತು. ರಾಜಕೀಯ ರಂಗಕ್ಕೆ ಆಗಷ್ಟೇ ಪಾದಾರ್ಪಣೆ ಮಾಡಿದ್ದ ಕೃಷ್ಣ ಅವರ ಈ ಸಂಬಂಧ ಕೊನೆಕ್ಷಣದಲ್ಲಿ ಮುರಿದು ಬಿದ್ದಿತ್ತು.
ಬುದ್ದಿವಂತಿಕೆ, ಆಕರ್ಷಕ ವ್ಯಕ್ತಿತ್ವ ಹೊಂದಿದ್ದ ಕೃಷ್ಣ ಅವರು ನಾಲ್ಕು ಭಾಷೆಗಳ ನಟಿ ಸರೋಜಾ ದೇವಿಯವರ ಹೃದಯವನ್ನೂ ಗೆದ್ದಿದ್ದರು. ಆಗಿನ ಕಾಲದಲ್ಲಿ ಇವರ ನಡುವಿನ ಪ್ರೀತಿ ಸಾಕಷ್ಟು ಚರ್ಚೆಯನ್ನೂ ಹುಟ್ಟುಹಾಕಿತ್ತು. ರಾಜಕೀಯ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್.ಎಂ. ಕೃಷ್ಣ ಯುವ ನಾಯಕರಾಗಿದ್ದಾಗ ಬಿ. ಸರೋಜಾದೇವಿ ಕನ್ನಡ, ತಮಿಳು, ತೆಲುಗು, ಹಿಂದಿ ಚಿತ್ರರಂಗದ ಖ್ಯಾತ ನಟಿಯಾಗಿ ಬೆಳೆದಿದ್ದರು. ಅವರ ಸೌಂದರ್ಯ ಮತ್ತು ಅಭಿನಯ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿತ್ತು. ಇದೇ ವೇಳೆ ಎಸ್.ಎಂ ಕೃಷ್ಣ ಮತ್ತು ಸರೋಜಾದೇವಿ ನಡುವೆ ಪ್ರೇಮಾಂಕುರವಾಗಿತ್ತು. ಅಲ್ಲದೆ, ಈ ವಿಷಯ ಮದುವೆ ಹಂತದ ವರೆಗೂ ಬಂದು ಕೊನೆಗೆ ಮುರಿದು ಬಿದ್ದಿತ್ತು.
![]()

ಮದುವೆಯ ವಿಚಾರದಲ್ಲಿ ಎಸ್. ಎಂ. ಕೃಷ್ಣ ಕುಟುಂಬ ಹಾಗೂ ಬಿ.ಸರೋಜಾದೇವಿ ಕುಟುಂಬಗಳ ನಡುವೆ ಪ್ರಾಥಮಿಕ ಮಾತುಕತೆಯೂ ನಡೆದಿತ್ತು. ಆದರೆ, ಇವರ ವಿವಾಹಕ್ಕೆ ಕೃಷ್ಣ ಕುಟುಂಬದಲ್ಲಿ ಒಪ್ಪಿಗೆ ಸಿಕ್ಕಿರಲಿಲ್ಲ. ಸಿನಿಮಾ ರಂಗದ ಯುವತಿಯನ್ನು ಸೊಸೆಯನ್ನಾಗಿ ಮಾಡಿಕೊಳ್ಳಲು ಎಸ್.ಎಂ.ಕೃಷ್ಣ ಕುಟುಂಬದ ಹಿರಿಯರು ಒಲವು ತೋರಿರಲಿಲ್ಲ. ಹೀಗಾಗಿ ಸರೋಜಾ ದೇವಿ ಹಾಗೂ ಎಸ್.ಎಂ.ಕೃಷ್ಣ ನಡುವೆ ವಿವಾಹ ಸಂಬಂಧ ಏರ್ಪಡಲಿಲ್ಲ ಎಂದು ಎಸ್.ಎಂ.ಕೃಷ್ಣ ಸೋದರ ಎಸ್. ಎಂ. ಶಂಕರ್ ಹಿಂದೊಮ್ಮೆ ಹೇಳಿದ್ದರು.

)
)
ಇದೇ ವಿಷಯವನ್ನು ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್, ತಮ್ಮ ಆತ್ಮಕಥನ "ಹಳ್ಳಿ ಹಕ್ಕಿಯ ಹಾಡು" ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ಎಸ್.ಎಂ ಕೃಷ್ಣ ಹಾಗೂ ಸರೋಜಾ ದೇವಿ ನಡುವಿನ ಪ್ರೇಮ ಪ್ರಸಂಗದ ಬಗ್ಗೆ ಉಲ್ಲೇಖಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಈ ಬಗ್ಗೆ ಕೃಷ್ಣ ಆಗಲೀ, ಸರೋಜಾದೇವಿ ಆಗಲೀ ಪ್ರಸ್ತಾಪಿಸದೇ ಇದ್ದುದರಿಂದ ವಿವಾದ ಆಗದೇ ಮುಚ್ಚಿ ಹೋಗಿತ್ತು.
ಇದಕ್ಕೆ ಕಾರಣವೂ ಇದೆ. ಈ ಚರ್ಚೆ ಬಂದಾಗ ಎಸ್.ಎಂ.ಕೃಷ್ಣ ಮಹಾರಾಷ್ಟ್ರದಲ್ಲಿ ರಾಜ್ಯಪಾಲ ಹುದ್ದೆಯಲ್ಲಿದ್ದರು. ಹಾಗಾಗಿ ಮಾಮೂಲೀ ರಾಜಕಾರಣಿ ರೀತಿ ಎಸ್.ಎಂ.ಕೃಷ್ಣ ಪ್ರತಿಕ್ರಿಯೆ ನೀಡುವಂತಿರಲಿಲ್ಲ. ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದರು. ಆದರೆ, ಕೃಷ್ಣ ಅವರ ಪತ್ನಿ ಪ್ರೇಮಾ ಅವರು ಪತ್ರಿಕಾ ಹೇಳಿಕೆ ಕೊಟ್ಟು ವಿವಾದಕ್ಕೆ ತೆರೆ ಎಳೆದಿದ್ದರು. ಸರೋಜಾದೇವಿ ಅವರನ್ನು ಎಸ್.ಎಂ.ಕೃಷ್ಣ ಅವರ ಜೊತೆ ಮದುವೆ ಮಾಡುವ ಪ್ರಸ್ತಾಪ ಬಂದಿತ್ತು. ಆದರೆ, ಎಸ್.ಎಂ.ಕೃಷ್ಣ ಮನೆಯಲ್ಲಿ ಸಿನಿಮಾ ಹಿನ್ನಲೆಯವರನ್ನು ಸೊಸೆಯನ್ನಾಗಿ ಮಾಡಿಕೊಳ್ಳಲು ಹಿರಿಯರು ಒಪ್ಪದೇ ಇದ್ದುದರಿಂದ ವಿಷಯ ಅಲ್ಲಿಗೇ ಮುಗಿದಿತ್ತು ಎಂದು ಸ್ಪಷ್ಟನೆ ನೀಡಿದ್ದರು.
ಸರೋಜಾದೇವಿ ಪುಸ್ತಕದಲ್ಲಿ ಹಳೆ ವಿಚಾರ ದಾಖಲಿಸಿದ್ದನ್ನು ಕೇಳಿ ಗರಂ ಆಗಿದ್ದರಂತೆ. ಆದರೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಲು ಮುಂದಾಗಿರಲಿಲ್ಲ. ಕೃಷ್ಣ ಅವರು ಪ್ರೇಮಾ ಅವರನ್ನು ಮದುವೆಯಾಗಿದ್ದರೆ, ನಟಿ ಸರೋಜಾದೇವಿ 1967ರಲ್ಲಿ ಶ್ರೀಹರ್ಷ ಎಂಬ ಜರ್ಮನಿಯ ಎಂಜಿನಿಯರ್ ರನ್ನು ಮದುವೆಯಾಗಿದ್ದರು. ಆದರೆ ಹರ್ಷ ಮದುವೆಯಾದ ಕೆಲವು ವರ್ಷಗಳಲ್ಲೇ ಹೃದಯಾಘಾತದಿಂದ ಸಾವು ಕಂಡಿದ್ದರು. ಅನಂತರ ಎರಡನೇ ಮದುವೆ ಆಫರ್ ಬಂದರೂ ಸರೋಜಾದೇವಿ ಒಬ್ಬಂಟಿಯಾಗಿಯೇ ದೀರ್ಘ ಜೀವನ ಕಳೆದಿದ್ದರು.
In a lesser-known chapter of Karnataka’s social and political history, a romantic relationship once blossomed between celebrated actress B. Saroja Devi and former Chief Minister S.M. Krishna. At the peak of her film career and as Krishna was emerging as a dynamic young leader, the two shared a deep bond that reportedly came close to culminating in marriage. However, the relationship fell apart at the last moment due to family opposition.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am