ಬ್ರೇಕಿಂಗ್ ನ್ಯೂಸ್
23-12-20 06:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ಬ್ರಿಟನ್ ಕೊರೊನಾ ವೈರಸ್ ಆಪತ್ತನ್ನು ಎದುರಿಸಲು ಇಂದಿನಿಂದಲೇ ರಾತ್ರಿ ಕರ್ಫ್ಯೂ ಜಾರಿಗೆ ರಾಜ್ಯ ಸರಕಾರ ನಿರ್ಧರಿಸಿತ್ತು. ಆದರೆ ಬಾರ್, ಪಬ್ ಮಾಲೀಕರ ಒತ್ತಡಕ್ಕೆ ಮಣಿದ ಸರಕಾರ ಕರ್ಫ್ಯೂ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಗಳನ್ನು ತಂದಿದೆ. ಇಂದು ಜಾರಿಗೆಯಾಗುತ್ತೆ ಎಂದಿದ್ದನ್ನು ನಾಳೆ(ಡಿ.24)ಯಿಂದ ಜ.2ರ ವರೆಗೆ ಕರ್ಫ್ಯೂ ಇರಲಿದೆ ಎಂದು ಹೇಳಿದೆ.
ಅಲ್ಲದೆ, ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಎಂದಿದ್ದನ್ನು ಬದಲಿಸಿ 11 ಗಂಟೆಯಿಂದ ಬೆಳಗ್ಗೆ 5ರ ವರೆಗೆ ಎಂಬುದಾಗಿ ಬದಲಾವಣೆ ಮಾಡಿದೆ. ರಾತ್ರಿ 10ರಿಂದಲೇ ಬಂದ್ ಮಾಡಿದರೆ, ನಮ್ಮ ವ್ಯಾಪಾರಕ್ಕೆ ತೊಂದರೆಯಾಗಲಿದೆ ಎಂದು ಹೊಟೇಲ್, ಬಾರ್ ಮಾಲೀಕರ ಸಂಘ ಮತ್ತು ಟ್ಯಾಕ್ಸಿ ವಾಹನಗಳ ಸಂಘದವರು ಮನವಿ ಮಾಡಿದ್ದರು. ಇದನ್ನು ಪರಿಗಣಿಸಿ, ರಾತ್ರಿ 11ರಿಂದ ನೈಟ್ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ.
ಅಲ್ಲದೆ, ರಾತ್ರಿ ವೇಳೆ ಕರ್ಫ್ಯೂ ಇದ್ದರೂ, ಬಸ್, ಆಟೋ ಇನ್ನಿತರ ಟ್ಯಾಕ್ಸಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳು, ತರಕಾರಿ, ಸರಕು ಸಾಗಾಟದ ವಾಹನಗಳ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಎಲ್ಲಾ ರೀತಿಯ ಗೂಡ್ಸ್ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಇದಲ್ಲದೆ, ರಾತ್ರಿ ವೇಳೆ ಬಸ್, ರೈಲು, ವಿಮಾನ ಸಂಚಾರಕ್ಕೂ ಅವಕಾಶ ನೀಡಲಾಗಿದೆ.

ನೆಪಕ್ಕಷ್ಟೇ ಕರ್ಫ್ಯೂ ಜಾರಿ !
ಈ ಮೂಲಕ ಕರ್ಫ್ಯೂ ಜಾರಿ ಇದ್ದರೂ, ಜನರ ಓಡಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಲಾಗಿದೆ. ದೂರದ ಊರುಗಳಿಗೆ ತೆರಳುವ ಬಸ್, ಇನ್ನಿತರ ವಾಹನಗಳ ಸಂಚಾರಕ್ಕೂ ಬ್ರೇಕ್ ಇರುವುದಿಲ್ಲ. ಹಾಗಾಗಿ ಖಾಸಗಿ ವಾಹನಗಳ ಓಡಾಟಕ್ಕೂ ಪೂರ್ತಿ ಬ್ರೇಕ್ ಇರುವುಲ್ಲ. ರಾತ್ರಿ ವೇಳೆ ಸಂಚರಿಸುವ ವಾಹನಗಳನ್ನು ನೀವು ಟ್ಯಾಕ್ಸಿಯೋ, ಖಾಸಗಿಯೋ, ಅಗತ್ಯಕ್ಕೆ ಸಂಚಾರ ಮಾಡುತ್ತೀರೋ ಎಂಬುದನ್ನು ಪೊಲೀಸರು ಕೇಳಿಕೊಂಡು ಕೂರಲು ಆಗೋದು ಇಲ್ಲ. ಹೀಗಾಗಿ ಈ ಬಾರಿಯ ನೈಟ್ ಕರ್ಫ್ಯೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿರಲಿದೆ ಅನ್ನೋದು ಪಕ್ಕಾ.

11 ಗಂಟೆಗೆ ಬಾರ್, ಪಬ್ ಬಂದ್ ಆಗಬೇಕೆಂಬ ಕಾನೂನು ಮೊದಲಿನಿಂದಲೂ ಇತ್ತು. ಅದನ್ನು ಪೊಲೀಸರು, ನಮ್ಮ ಆಡಳಿತ ಸರಿಯಾಗಿ ಪಾಲನೆ ಮಾಡುತ್ತಿರಲಿಲ್ಲ ಅಷ್ಟೇ. ಈಗ 11ಕ್ಕೆ ಕ್ಲೋಸ್ ಅನ್ನುವ ಹೊಸ ಮಾರ್ಗಸೂಚಿ ಹೊಸತೇನು ಬದಲಾವಣೆ ಮಾಡಲಾರದು. ಕ್ರಿಸ್ಮಸ್, ಹೊಸ ವರ್ಷಕ್ಕೆ ಗೌಜಿ, ಗಮ್ಮತ್ತಿಗೆ ಬ್ರೇಕ್ ಹಾಕಬೇಕೆಂಬ ನೆಲೆಯಲ್ಲಿ ನೈಟ್ ಕರ್ಫ್ಯೂ ವಿಧಿಸಿದ್ದರೂ, ಇದರಿಂದ ದೊಡ್ಡ ಬ್ರೇಕ್ ಬೀಳುವ ಸಾಧ್ಯತೆ ಕಡಿಮೆ ಎಂದೇ ಹೇಳಬೇಕು.
The Karnataka Government which announced night curfew from Dec 23rd has now created the high drama of postponing it to Dec 24 with all services like Car, Buses and Bars permitted to operate. Public outrage anger of asking what's the purpose of Night Curfew.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm