ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am