ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm