ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am