ಬ್ರೇಕಿಂಗ್ ನ್ಯೂಸ್
18-07-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಮತ್ತು ಮೂರು ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಭಾವ್ಯ ಸ್ಥಳಗಳನ್ನು ಗುರುತಿಸುವ ಬಗ್ಗೆ ಹಾಗೂ ಈ ಕುರಿತು ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
NTPC ಅಧ್ಯಯನ ಮಾಡಲು ಮೂರು ಸ್ಥಳಗಳನ್ನು ಗುರುತಿಸಿದ್ದು ಚರ್ಚೆ ನಡೆಸಲಾಗಿದೆ. ಆದರೆ ಇದನ್ನು ಸಚಿವ ಸಂಪುಟ ಸಭೆ ಒಪ್ಪಲಿಲ್ಲ. ಸಂಭಾವ್ಯ ಕಾರ್ಯ ಸಾಧ್ಯ ಪರ್ಯಾಯಗಳಿಗಾಗಿ ಇಡೀ ರಾಜ್ಯದಲ್ಲಿ ಅಧ್ಯಯನ ಮಾಡುವಂತೆ ಸೂಚಿಸಲು ನಿರ್ಧರಿಸಿದ್ದೇವೆ. ನಂತರ ರಾಜ್ಯ ಸರ್ಕಾರವು ಪರಿಣತರ ಅಭಿಪ್ರಾಯ ತೆಗೆದುಕೊಳ್ಳುತ್ತದೆ ಎಂದು ಎಚ್.ಕೆ ಪಾಟೀಲ್ ಹೇಳಿದರು.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಮಾಣು ಯೋಜನೆ ಹೊಂದುವ ಅಗತ್ಯವಿದೆ ಎಂಬುದಕ್ಕೆ ಒಪ್ಪಿದ್ದೇವೆ. ಆದರೆ ಸ್ಥಳದ ವಿಷಯದಲ್ಲಿ ಗೊಂದಲ ಇದೆ. ಎಲ್ಲಾ ಸಂಭಾವ್ಯ ಪರ್ಯಾಯಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪ್ರಸ್ತುತ NTPC ಗುರುತಿಸಿರುವ ಮೂರು ಸ್ಥಳಗಳು ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿವೆ. ಚರ್ಚೆಯ ನಂತರ ವಿವಿಧ ಕಾರಣಗಳಿಗಾಗಿ ಅವುಗಳನ್ನು ಪರಿಗಣಿಸಲಾಗಿಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ- ಬಾದಾಮಿ- ಐಹೊಳೆ- ಪಟ್ಟದಕಲ್ಲು- ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಸಿ ಸರ್ಕ್ಯೂಟ್ ಅನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್ ಮೂಲಕ ಅಂದಾಜು 2,166.22 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪಾಟೀಲ್ ಹೇಳಿದರು.
ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿರುವ 126 ಕೆರೆಗಳನ್ನು ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ತುಂಬಿಸುವ ನೀರಾವರಿ ಯೋಜನೆಯ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕೆಲಸವನ್ನು 128 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
The Karnataka Cabinet has given in-principle approval to identify potential locations for establishing a nuclear power plant and three additional thermal power plants in the state, Law and Parliamentary Affairs Minister H.K. Patil announced on Thursday.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm