ಬ್ರೇಕಿಂಗ್ ನ್ಯೂಸ್
19-07-25 03:05 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಪೊಲೀಸರು 'ಆರ್ಸಿಬಿ ಸೇವಕರು' ಎಂಬಂತೆ ವರ್ತಿಸಿದ್ದರಿಂದ ಕಾಲ್ತುಳಿತ ಪ್ರಕರಣ ಸಂಭವಿಸಿತು ಎಂಬ ಸರ್ಕಾರದ ನಿಲುವಿಗೆ ಅಮಾನತುಗೊಂಡ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳನ್ನು ಅಮಾನತು ಪಡಿಸಿದ್ದ ಕ್ರಮವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆಯುವಂತೆ ಕೋರಿ ಆರ್ಸಿಬಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಮುಂದೆ ವಿಕಾಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು.
ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.
‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸದೇ ಇದ್ದರೂ ತಪ್ಪು ಎಂಬುದಕ್ಕೆ ಈ ಪ್ರಕರಣ ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಸ್ ಕುಮಾರ್ ಅವರನ್ನು ಸರ್ಕಾರ ನಿಂದಿಸುತ್ತಿದೆ ಎಂದು ಆಕ್ಷೇಪಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
Suspended IPS officer Vikas Kumar has raised strong objections to the Karnataka government's claim that a stampede incident occurred because the police behaved like "RCB fans" instead of maintaining law and order.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm