ಬ್ರೇಕಿಂಗ್ ನ್ಯೂಸ್
19-07-25 03:05 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಪೊಲೀಸರು 'ಆರ್ಸಿಬಿ ಸೇವಕರು' ಎಂಬಂತೆ ವರ್ತಿಸಿದ್ದರಿಂದ ಕಾಲ್ತುಳಿತ ಪ್ರಕರಣ ಸಂಭವಿಸಿತು ಎಂಬ ಸರ್ಕಾರದ ನಿಲುವಿಗೆ ಅಮಾನತುಗೊಂಡ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳನ್ನು ಅಮಾನತು ಪಡಿಸಿದ್ದ ಕ್ರಮವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆಯುವಂತೆ ಕೋರಿ ಆರ್ಸಿಬಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಮುಂದೆ ವಿಕಾಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು.
ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.
‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸದೇ ಇದ್ದರೂ ತಪ್ಪು ಎಂಬುದಕ್ಕೆ ಈ ಪ್ರಕರಣ ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಸ್ ಕುಮಾರ್ ಅವರನ್ನು ಸರ್ಕಾರ ನಿಂದಿಸುತ್ತಿದೆ ಎಂದು ಆಕ್ಷೇಪಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
Suspended IPS officer Vikas Kumar has raised strong objections to the Karnataka government's claim that a stampede incident occurred because the police behaved like "RCB fans" instead of maintaining law and order.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am