ಬ್ರೇಕಿಂಗ್ ನ್ಯೂಸ್
20-07-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20 : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ ರೀತಿಯಲ್ಲೇ ಮತ್ತೊಂದು ಪ್ರಕರಣ ಕೊಪ್ಪಳ ಜಿಲ್ಲೆಯ ಕೆಐಆರ್ಡಿಎಲ್ ನಲ್ಲಿ ನಡೆದಿದೆ. ಹಗರಣದಲ್ಲಿ ಭಾಗಿಯಾದ ಇಬ್ಬರು ಅಧಿಕಾರಿಗಳ ವಿರುದ್ದ ಕೊಪ್ಪಳ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.
ಕೆಐಆರ್ಡಿಎಲ್ ನಲ್ಲಿ ನಡೆದಿರುವ 96 ಕಾಮಗಾರಿಗಳಲ್ಲಿ 72 ಕೋಟಿ ಸರ್ಕಾರಿ ಹಣವನ್ನ ದುರ್ಬಳಕೆ ಮಾಡಿರುವ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ. 2019 ರಿಂದ 2025 ರ ವರೆಗೆ ಕೊಪ್ಪಳ ಜಿಲ್ಲೆಯ ವಿವಿಧೆಡೆ ನಡೆದ 96 ಕಾಮಗಾರಿಗಳಲ್ಲಿ ಅಂದಿನ ಇಇ ಆಗಿದ್ದ ಝಡ್ ಎಂ ಚಿಂಚೋಳಿಕರ್ ಹಾಗೂ ಹೊರ ಗುತ್ತಿಗೆ ನೌಕರನಾಗಿದ್ದ ಕಳಕಪ್ಪ ನಿಡಗುಂದಿ ಎಂಬವರು 72 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ
ಕೆಆರ್ಐಡಿಎಲ್ ಎಂಡಿ ಬಸವರಾಜ ನಿರ್ದೇಶನ ಮೇರೆಗೆ ಕೊಪ್ಪಳ ವಿಭಾಗದ ಇಇ ಅನಿಲ್ಪಾಟೀಲ್, ನೆಲೋಗಿಪುರ ಉಪವಿಭಾಗದ ಆನಂದ ಕಾರ್ಲಕುಂಟಿ ಖುದ್ದಾಗಿ ಕೊಪ್ಪಳದ ಲೋಕಾಯುಕ್ತ ಕಚೇರಿಗೆ ತೆರಳಿ ಆರೋಪಿತ ಇಬ್ಬರು ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
2019ರಿಂದ 2025ರ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು ಸೇರಿ 96 ಕಾಮಗಾರಿಗಳನ್ನ ಮಾಡಿರೋದಾಗಿ ನಕಲಿ ಬಿಲ್ ಪಾವತಿ ಮಾಡುವ ಮೂಲಕ 72 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸದ್ಯ 13 ಅಂಶಗಳನ್ನು ಒಳಗೊಂಡ ಕಾಮಗಾರಿ, ಟೆಂಡರ್ ಮೊತ್ತ, ಟೆಂಡರ್ ದಿನಾಂಕ, ಪೂರ್ಣಗೊಂಡ ಕಾಮಗಾರಿ, ಅರ್ಧ ಮುಗಿಸಿರುವ ಕಾಮಗಾರಿ ಜೊತೆಗೆ ಬಿಲ್ ಪಾವತಿಯಾಗಿರುವ ಮಾಹಿತಿ ಹಾಗೂ ಬಾಕಿ ಇರುವ ಎಲ್ಲ ದಾಖಲೆಗಳನ್ನು ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿದ್ದಾರೆ.
ಇಂಜಿನಿಯರ್ ಚಿಂಚೋಳಿಕರ್ ಅಧಿಕಾರ ಅವಧಿಯಲ್ಲಿ 72 ಕೋಟಿ ದುರ್ಬಳಕೆ ಆದ ವಿಚಾರಕ್ಕೆ ಸರ್ಕಾರ ಇವರನ್ನ ಸಸ್ಪೆಂಡ್ ಮಾಡಿತ್ತು. ಆದ್ರೆ ಇದೇ ಭ್ರಷ್ಟ ಅಧಿಕಾರಿಯನ್ನ ಆಬಳಿಕ ದಾವಣಗೆರೆ ವಿಭಾಗ 2 ರಲ್ಲಿ ನಿಯೋಜನೆ ಮಾಡಲಾಗಿತ್ತು. ಇಷ್ಟೊಂದು ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮಾಡಿ, ಪ್ರಕರಣ ಲೋಕಾಯುಕ್ತದಲ್ಲಿ ತನಿಖೆ ಹಂತದಲ್ಲಿರುವಾಗಲೇ ಇದೇ ವ್ಯಕ್ತಿಗೆ ಮತ್ತೆ ಆಡಳಿತಾತ್ಮಕ ಹುದ್ದೆ ನೀಡಿರುವುದು ಪ್ರಶ್ನೆ ಮೂಡುವಂತಾಗಿದೆ.
In a scam reminiscent of the infamous Maharshi Valmiki Development Corporation fraud, yet another financial irregularity has surfaced — this time in the Karnataka Infrastructure Development Limited (KIRDCL) operations in Koppal district. A formal complaint, backed by documented evidence, has been lodged with the Koppal Lokayukta against two individuals involved in the alleged embezzlement.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm