ಬ್ರೇಕಿಂಗ್ ನ್ಯೂಸ್
22-07-25 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದ್ದಾರೆ. ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸಾರ್ಕಾರದ ಪಾತ್ರವಿಲ್ಲ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಜೋಶಿ, ರಾಜ್ಯ ಸರ್ಕಾರ ಮಾಡುವುದೆಲ್ಲ ಮಾಡಿ ಈಗ ತನಗೆ ಸಂಬಂಧವಿಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟಿರುವುದು ರಾಜ್ಯದ ತೆರಿಗೆ ಇಲಾಖೆ ಅಧಿಕಾರಿಗಳು. ಹಾಗಿದ್ದರೂ ರಾಜ್ಯ ಸರ್ಕಾರಕ್ಕೂ, ಜಿಎಸ್ಟಿ ನೋಟಿಸ್ಗೂ ಸಂಬಂಧವಿಲ್ಲ ಎನ್ನುತ್ತ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದ್ದಾರೆ.
ಬೇರೆಲ್ಲೂ ಇಲ್ಲದ ನೋಟಿಸ್ ಇಲ್ಲೇಕೆ? ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಬಹುತೇಕ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತಿತ್ತು. ಆದರೆ, ಬೇರೆ ಯಾವುದೇ ರಾಜ್ಯಗಳಲ್ಲೂ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಣ್ಣಪುಟ್ಟ ವ್ಯಾಪಾರಾಸ್ಥರಿಗೆ ಜಿಎಸ್ಟಿ ನೋಟಿಸ್ ನೀಡಲಾಗಿಲ್ಲ. ಕರ್ನಾಟಕದಲ್ಲಿ ಮಾತ್ರ ಇದಾಗಿದೆ ಎಂದಿದ್ದಾರೆ. GSTಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ʼCGSTʼ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ʼSGSTʼ ಎಂದು ಎರಡು ವಿಭಾಗವಿದೆ. ಆದರಂತೆ ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಜಿಎಸ್ಟಿ ಕೌನ್ಸಿಲ್ನಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಇದರಲ್ಲಿ ಅಂತಿಮವಾಗಿರಲಿದೆ ಎಂದೂ ಹೇಳಿದ್ದಾರೆ.
Union Minister for Consumer Affairs, Pralhad Joshi, has clarified that the notices issued to small traders regarding pending taxes in Karnataka are the responsibility of the state government and not the central government. His remarks come in response to Deputy Chief Minister D.K. Shivakumar's earlier statement claiming the state had no role in issuing such notices.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm