ಬ್ರೇಕಿಂಗ್ ನ್ಯೂಸ್
22-07-25 10:41 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ವ್ಯಾಪಾರಿಗಳು ತೆರಿಗೆ ನೋಟಿಸ್ಗೆ ಗಾಬರಿಯಾಗೋದು ಬೇಡ. ನಿಮ್ಮ ಉತ್ತರ ಅವಲಂಬಿಸಿ ದಂಡದ ಮೊತ್ತ, ಜಿಎಸ್ಟಿ ಎಷ್ಟೆಂದು ನಿಗದಿಯಾಗಲಿದೆ. ನೋಟಿಸ್ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್ಟಿ, ದಂಡ ಪಾವತಿ ಕಡ್ಡಾಯ ಆಗಿರುವುದಿಲ್ಲ ಎಂದು ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಲು ಯತ್ನಿಸಿದೆ.
ಕೋರಮಂಗಲದ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ 'ಜಿಎಸ್ಟಿ ತಿಳಿಯಿರಿ' ಎನ್ನುವ ವಿಷಯದಲ್ಲಿ ಸಭೆ ನಡೆಸಲಾಗಿದ್ದು, ವ್ಯಾಪಾರಿಗಳ ಪ್ರಶ್ನೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ಮೀರಾ ಪಂಡಿತ್ ಉತ್ತರಿಸಿದರು. ಮೊದಲ ಹಂತದಲ್ಲಿ ಕೋಟ್ಯಂತರ ರು. ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ 850 ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಜಿಎಸ್ಟಿ ವಂಚನೆ ಕುರಿತು ಬೇರೆ ಬೇರೆ ಮೂಲಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಸಂಸ್ಥೆಗಳ ಮಾಹಿತಿ ರೇರಾದಿಂದ ಪಡೆದು ನೋಟಿಸ್ ನೀಡಲಾಗುವುದು ಎಂದು ಹೇಳಿದರು.
ಇದೇ ವೇಳೆ ನೋಟಿಸ್ನಲ್ಲಿ ಉಲ್ಲೇಖಿಸಿರುವಷ್ಟು ಸರಕು ಮತ್ತು ಸೇವಾ ತೆರಿಗೆ, (ಜಿಎಸ್ಟಿ) ದಂಡ ಮತ್ತು ಬಡ್ಡಿಯನ್ನು ಸಣ್ಣ ವ್ಯಾಪಾರಿಗಳು ಪಾವತಿಸುವುದು ಕಡ್ಡಾಯವಲ್ಲ. ನೋಟಿಸ್'ಗೆ ನೀವು ನೀಡುವ ಉತ್ತರದ ಆಧಾರದ ಮೇಲೆ ತೆರಿಗೆ ಪ್ರಮಾಣ ಕಡಿಮೆಯಾಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಜಿಎಸ್ಟಿ ಸಂಪೂರ್ಣ ವಿನಾಯಿತಿ ಇರುವ ಹಣ್ಣು, ತರಕಾರಿ, ಹಾಲು ಮುಂತಾದ ಉತ್ಪನ್ನಗಳೂ ಇವೆ. ಮತ್ತೊಂದೆಡೆ ಶೇ.28ರಷ್ಟು ಜಿಎಸ್ಟಿ ಇರುವ ಗುಟ್ಕಾ ಮತ್ತು ಸಿಗರೇಟು ಉತ್ಪನ್ನಗಳೂ ಇವೆ. ಹೀಗಾಗಿ, ವರ್ತಕರು ತಮ್ಮದು ಯಾವ ವ್ಯಾಪಾರ ಎಂದು ತಿಳಿಸಿದರೆ ತೆರಿಗೆ ಕಡಿಮೆಯಾಗುತ್ತದೆ ಎಂದರು. 2025ರ ಜನವರಿ ತಿಂಗಳಲ್ಲಿ ಪೋನ್ ಹಾಗೂ ಪೇಟಿಎಂನಿಂದ ವರ್ತಕರ ವಹಿವಾಟುಗಳ ಕುರಿತು ಡೇಟಾ ಸಿಕ್ಕಿದೆ. ಇದೇ ಆಧಾರದ ಮೇಲೆ ಜಿಎಸ್ಟಿ ಮಿತಿ ಮೀರಿ ವಹಿವಾಟು ನಡೆಸಿದವರನ್ನು ಗುರುತಿಸುತ್ತಿದ್ದೇವೆ. ಮೊದಲ ಹಂತದಲ್ಲಿ ಕೋಟ್ಯಂತರ ರೂ. ಹಣ ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಬೇಕರಿ, ಕಾಂಡಿಮೆಂಟ್, ಹಣ್ಣು-ತರಕಾರಿ, ಹೂವು, ಡೈರಿ, ಮಾಂಸದ ಅಂಗಡಿ, ಸಣ್ಣ ಗಾತ್ರದ ಬಟ್ಟೆ ವ್ಯಾಪಾರಿಗಳು ಇದರಲ್ಲಿದ್ದಾರೆ ಎಂದು ಅವರು ತಿಳಿಸಿದರು.
ಸೇವೆ ಸಂಬಂಧಿಸಿದ ವ್ಯಾಪಾರಕ್ಕೆ 20 ಲಕ್ಷ ರು. ಹಾಗೂ ಸಗಟು ವ್ಯಾಪಾರಕ್ಕೆ 40 ಲಕ್ಷ ರು. ಎಂದು ಜಿಎಸ್ಟಿ ಮಿತಿಯನ್ನು 8 ವರ್ಷಗಳ ಹಿಂದೆ ನಿಗದಿಪಡಿಸಲಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ವ್ಯಾಪಾರದಲ್ಲಿ ಲಾಭಾಂಶ ಕಡಿಮೆಯಾಗಿದೆ. ಹೀಗಾಗಿ, ಜಿಎಸ್ಟಿ ಮಿತಿಯನ್ನು ಕ್ರಮವಾಗಿ 50 ಲಕ್ಷ ರು. ಮತ್ತು 1 ಕೋಟಿ ರು.ಗೆ ಹೆಚ್ಚಿಸಬೇಕು ಎಂದು ಅನೇಕ ವ್ಯಾಪಾರಿಗಳು ಮನವಿ ಮಾಡಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದರು.
Small traders who have received GST notices need not panic, as the penalty amounts mentioned in the notices are not final or binding, the Karnataka Commercial Tax Department has clarified. Officials emphasized that the final tax and penalty amounts will be determined based on the trader’s response to the notice.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm