ಬ್ರೇಕಿಂಗ್ ನ್ಯೂಸ್
22-07-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಮಂಜುನಾಥ ಸ್ವಾಮಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಎಸ್ಐಟಿ ರಚನೆ ಹಿಂದೂ ಪರ ನೀತಿ
“ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ. ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ ಎಂದರು
ಯಾರನ್ನೂ ರಕ್ಷಿಸುವ ಅವಮಾನಿಸುವ ಪ್ರಶ್ನೆ ಇಲ್ಲ:
ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು. 40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ” ಎಂದು ತಿಳಿಸಿದರು.
Senior Congress leader and former MP D.K. Suresh has stated that the Dharmasthala temple is not the private property of any one family, but a sacred place that belongs to all devotees. He emphasized that if Lord Manjunatha is disrespected, it is an insult to all devotees.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm